<p><strong>ಮಂಗಳೂರು: </strong>ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್ ಸೋಂಕು ಹೆಚ್ಚುತ್ತಿರುವ ಕಾರಣದಿಂದ ಕೇರಳದ ಗಡಿಯನ್ನು ಬಂದ್ ಮಾಡಲಾಗಿದೆ ಎಂಬುದು ವದಂತಿಯಾಗಿದ್ದು, ಈ ಬಗ್ಗೆ ಯಾರೂ ಗಮನ ಕೊಡಬಾರದು ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ಸ್ಪಷ್ಟನೆ ನೀಡಿದ್ದಾರೆ.</p>.<p>ಆ ರೀತಿಯ ಯಾವುದೇ ಪ್ರಕ್ರಿಯೆ ನಡೆದಿಲ್ಲ. ಏನೇ ಇದ್ದರೂ ಸಾರ್ವಜನಿಕರಿಗೆ ಮಾಹಿತಿ ನೀಡಲಾಗುತ್ತದೆ. ಯಾರೂ ಗೊಂದಲ ಮೂಡಿಸುವ ಸುಳ್ಳು ಸುದ್ದಿ ಹರಡಬಾರದು ಎಂದು ಅವರು ತಿಳಿಸಿದ್ದಾರೆ.</p>.<p>ಲಾಕ್ಡೌನ್ ಆದೇಶ ರಾಜ್ಯ ಸರ್ಕಾರದಿಂದ ಆಗುವ ಪ್ರಕ್ರಿಯೆಯಾಗಿದ್ದು, ಸದ್ಯಕ್ಕೆ ಇರುವ ನಿಯಮಗಳಷ್ಟೇ ಪಾಲನೆ ಮಾಡಲಾಗುತ್ತಿದೆ. ಜುಲೈ 5ರಿಂದ ನಾಲ್ಕು ಭಾನುವಾರ ಕರ್ಫ್ಯೂ ಜಾರಿಯಲ್ಲಿರುತ್ತದೆ. ಆ ದಿನ ಅಗತ್ಯ ಸೇವೆಗಳಿಗಷ್ಟೇ ಅವಕಾಶ ನೀಡಲಾಗುತ್ತದೆ. ಈ ಬಗ್ಗೆ ಯಾವುದೇ ಬದಲಾವಣೆಗಳಿದ್ದಲ್ಲಿ ಸಾರ್ವಜನಿಕರಿಗೆ ಮಾಹಿತಿ ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ.</p>.<p><strong>ಕಾಸರಗೋಡು ಜಿಲ್ಲಾಧಿಕಾರಿ ಸ್ಪಷ್ಟನೆ:</strong> ಕಾಸರಗೋಡು ಜಿಲ್ಲಾಡಳಿತ ಕೇರಳ ಗಡಿಯನ್ನು ಸಂಪರ್ಕಿಸುವ ರಾಜ್ಯದ ಎಲ್ಲ ರಸ್ತೆಗಳನ್ನು ಬಂದ್ ಮಾಡಿದೆ ಎಂಬ ಸುದ್ದಿ ಹರಿದಾಡುತ್ತಿದ್ದು, ಇದರಲ್ಲಿ ಸತ್ಯಾಂಶವಿಲ್ಲ ಎಂದು ಕಾಸರಗೋಡು ಜಿಲ್ಲಾಧಿಕಾರಿ ಡಾ.ಡಿ.ಸಜಿತ್ ಬಾಬು ತಿಳಿಸಿದ್ದಾರೆ.</p>.<p>ಗಡಿಯ ರಸ್ತೆಗಳನ್ನು ಮುಚ್ಚುವ ಬಗ್ಗೆ ಹೊಸದಾಗಿ ಜಿಲ್ಲಾಡಳಿತ ಯಾವುದೇ ತೀರ್ಮಾನ ತೆಗೆದುಕೊಂಡಿಲ್ಲ. ಲಾಕ್ಡೌನ್ ಆರಂಭದಲ್ಲಿ ಬಂದ್ ಮಾಡಿದ್ದ ರಸ್ತೆಗಳನ್ನು ಮಾತ್ರ ಈಗಲೂ ಬಂದ್ ಮಾಡಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು: </strong>ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್ ಸೋಂಕು ಹೆಚ್ಚುತ್ತಿರುವ ಕಾರಣದಿಂದ ಕೇರಳದ ಗಡಿಯನ್ನು ಬಂದ್ ಮಾಡಲಾಗಿದೆ ಎಂಬುದು ವದಂತಿಯಾಗಿದ್ದು, ಈ ಬಗ್ಗೆ ಯಾರೂ ಗಮನ ಕೊಡಬಾರದು ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ಸ್ಪಷ್ಟನೆ ನೀಡಿದ್ದಾರೆ.</p>.<p>ಆ ರೀತಿಯ ಯಾವುದೇ ಪ್ರಕ್ರಿಯೆ ನಡೆದಿಲ್ಲ. ಏನೇ ಇದ್ದರೂ ಸಾರ್ವಜನಿಕರಿಗೆ ಮಾಹಿತಿ ನೀಡಲಾಗುತ್ತದೆ. ಯಾರೂ ಗೊಂದಲ ಮೂಡಿಸುವ ಸುಳ್ಳು ಸುದ್ದಿ ಹರಡಬಾರದು ಎಂದು ಅವರು ತಿಳಿಸಿದ್ದಾರೆ.</p>.<p>ಲಾಕ್ಡೌನ್ ಆದೇಶ ರಾಜ್ಯ ಸರ್ಕಾರದಿಂದ ಆಗುವ ಪ್ರಕ್ರಿಯೆಯಾಗಿದ್ದು, ಸದ್ಯಕ್ಕೆ ಇರುವ ನಿಯಮಗಳಷ್ಟೇ ಪಾಲನೆ ಮಾಡಲಾಗುತ್ತಿದೆ. ಜುಲೈ 5ರಿಂದ ನಾಲ್ಕು ಭಾನುವಾರ ಕರ್ಫ್ಯೂ ಜಾರಿಯಲ್ಲಿರುತ್ತದೆ. ಆ ದಿನ ಅಗತ್ಯ ಸೇವೆಗಳಿಗಷ್ಟೇ ಅವಕಾಶ ನೀಡಲಾಗುತ್ತದೆ. ಈ ಬಗ್ಗೆ ಯಾವುದೇ ಬದಲಾವಣೆಗಳಿದ್ದಲ್ಲಿ ಸಾರ್ವಜನಿಕರಿಗೆ ಮಾಹಿತಿ ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ.</p>.<p><strong>ಕಾಸರಗೋಡು ಜಿಲ್ಲಾಧಿಕಾರಿ ಸ್ಪಷ್ಟನೆ:</strong> ಕಾಸರಗೋಡು ಜಿಲ್ಲಾಡಳಿತ ಕೇರಳ ಗಡಿಯನ್ನು ಸಂಪರ್ಕಿಸುವ ರಾಜ್ಯದ ಎಲ್ಲ ರಸ್ತೆಗಳನ್ನು ಬಂದ್ ಮಾಡಿದೆ ಎಂಬ ಸುದ್ದಿ ಹರಿದಾಡುತ್ತಿದ್ದು, ಇದರಲ್ಲಿ ಸತ್ಯಾಂಶವಿಲ್ಲ ಎಂದು ಕಾಸರಗೋಡು ಜಿಲ್ಲಾಧಿಕಾರಿ ಡಾ.ಡಿ.ಸಜಿತ್ ಬಾಬು ತಿಳಿಸಿದ್ದಾರೆ.</p>.<p>ಗಡಿಯ ರಸ್ತೆಗಳನ್ನು ಮುಚ್ಚುವ ಬಗ್ಗೆ ಹೊಸದಾಗಿ ಜಿಲ್ಲಾಡಳಿತ ಯಾವುದೇ ತೀರ್ಮಾನ ತೆಗೆದುಕೊಂಡಿಲ್ಲ. ಲಾಕ್ಡೌನ್ ಆರಂಭದಲ್ಲಿ ಬಂದ್ ಮಾಡಿದ್ದ ರಸ್ತೆಗಳನ್ನು ಮಾತ್ರ ಈಗಲೂ ಬಂದ್ ಮಾಡಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>