<p><strong>ಮಂಗಳೂರು:</strong> ಆಡಳಿತಾತ್ಮಕ ದೃಷ್ಟಿಯಿಂದ ಸರ್ಕಾರ ಮಾಡಿದ ವರ್ಗಾವಣೆಯನ್ನು ಮಾಜಿ ಸಚಿವ ಯು.ಟಿ. ಖಾದರ್ ಅವರು ರಾಜಕೀಯಗೊಳಿಸಿದ್ದು ದುರದೃಷ್ಟಕರ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.</p>.<p>ಖಾದರ್ ಅವರ ಟ್ವೀಟ್ಗೆ ಟ್ವೀಟ್ ಮೂಲಕವೇ ಪ್ರತಿಕ್ರಿಯಿಸಿದ ಉಸ್ತುವಾರಿ ಸಚಿವರು, ಯಾವುದೇ ಆರೋಪಿಗಳನ್ನು ರಕ್ಷಿಸಲು ಇದು ಖಾದರ್ ಕಾಲವಲ್ಲ ಎಂದು ಖಾರವಾಗಿಯೇ ತಿರುಗೇಟು ನೀಡಿದ್ದಾರೆ.</p>.<p>ಕೊರೊನಾದಿಂದ ಮೃತಪಟ್ಟಿರುವವರ ಅಂತ್ಯ ಸಂಸ್ಕಾರದ ಸಂದರ್ಭದಲ್ಲಿ ಖಾದರ್ ಅವರು ಕಾನೂನು ಉಲ್ಲಂಘಿಸಿದ ಬಗ್ಗೆ ಕೋಟ ಅವರು ಟ್ವೀಟ್ನಲ್ಲಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.</p>.<p>ಕೊರೊನಾ ನಿಯಂತ್ರಣಕ್ಕೆ ಪ್ರತಿಪಕ್ಷಗಳ ಸಹಕಾರವನ್ನು ಸರ್ಕಾರ ಕೇಳಿದೆ. ದುರದೃಷ್ಟಕ್ಕೆ ಶವ ಸಂಸ್ಕಾರದ ನೆಪದಲ್ಲಿ ನಿಯಮಗಳನ್ನು ಉಲ್ಲಂಘಿಸಿ ಪ್ರಚಾರ ಪಡೆಯುತ್ತಿರುವುದು ಶೋಭೆಯಲ್ಲ ಎಂದಿದ್ದಾರೆ.</p>.<p>ಖಾದರ್ ಅವರು ಈ ಮುನ್ನ ಟ್ವೀಟ್ ಮೂಲಕ ಜಿಲ್ಲಾಧಿಕಾರಿ ಸಿಂಧೂ ರೂಪೇಶ್ ವರ್ಗಾವಣೆಯನ್ನು ಖಂಡಿಸಿದ್ದರು. ಆರೋಪಿಗೆ ಶಿಕ್ಷೆ ನೀಡುವ ಬದಲು ಜಿಲ್ಲಾಧಿಕಾರಿಗೆ ಶಿಕ್ಷೆ ನೀಡಿದೆ ಎಂದು ಟೀಕಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು:</strong> ಆಡಳಿತಾತ್ಮಕ ದೃಷ್ಟಿಯಿಂದ ಸರ್ಕಾರ ಮಾಡಿದ ವರ್ಗಾವಣೆಯನ್ನು ಮಾಜಿ ಸಚಿವ ಯು.ಟಿ. ಖಾದರ್ ಅವರು ರಾಜಕೀಯಗೊಳಿಸಿದ್ದು ದುರದೃಷ್ಟಕರ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.</p>.<p>ಖಾದರ್ ಅವರ ಟ್ವೀಟ್ಗೆ ಟ್ವೀಟ್ ಮೂಲಕವೇ ಪ್ರತಿಕ್ರಿಯಿಸಿದ ಉಸ್ತುವಾರಿ ಸಚಿವರು, ಯಾವುದೇ ಆರೋಪಿಗಳನ್ನು ರಕ್ಷಿಸಲು ಇದು ಖಾದರ್ ಕಾಲವಲ್ಲ ಎಂದು ಖಾರವಾಗಿಯೇ ತಿರುಗೇಟು ನೀಡಿದ್ದಾರೆ.</p>.<p>ಕೊರೊನಾದಿಂದ ಮೃತಪಟ್ಟಿರುವವರ ಅಂತ್ಯ ಸಂಸ್ಕಾರದ ಸಂದರ್ಭದಲ್ಲಿ ಖಾದರ್ ಅವರು ಕಾನೂನು ಉಲ್ಲಂಘಿಸಿದ ಬಗ್ಗೆ ಕೋಟ ಅವರು ಟ್ವೀಟ್ನಲ್ಲಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.</p>.<p>ಕೊರೊನಾ ನಿಯಂತ್ರಣಕ್ಕೆ ಪ್ರತಿಪಕ್ಷಗಳ ಸಹಕಾರವನ್ನು ಸರ್ಕಾರ ಕೇಳಿದೆ. ದುರದೃಷ್ಟಕ್ಕೆ ಶವ ಸಂಸ್ಕಾರದ ನೆಪದಲ್ಲಿ ನಿಯಮಗಳನ್ನು ಉಲ್ಲಂಘಿಸಿ ಪ್ರಚಾರ ಪಡೆಯುತ್ತಿರುವುದು ಶೋಭೆಯಲ್ಲ ಎಂದಿದ್ದಾರೆ.</p>.<p>ಖಾದರ್ ಅವರು ಈ ಮುನ್ನ ಟ್ವೀಟ್ ಮೂಲಕ ಜಿಲ್ಲಾಧಿಕಾರಿ ಸಿಂಧೂ ರೂಪೇಶ್ ವರ್ಗಾವಣೆಯನ್ನು ಖಂಡಿಸಿದ್ದರು. ಆರೋಪಿಗೆ ಶಿಕ್ಷೆ ನೀಡುವ ಬದಲು ಜಿಲ್ಲಾಧಿಕಾರಿಗೆ ಶಿಕ್ಷೆ ನೀಡಿದೆ ಎಂದು ಟೀಕಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>