ತುಳುನಾಡಿನ ಮೀನು ಹಿಡಿಯುವ ಜಾತ್ರೆ ಎಂದೇ ಪ್ರಸಿದ್ಧವಾದ ಖಂಡಿಗೆ ಧರ್ಮರಸು ಶ್ರೀ ಉಳ್ಳಾಯ ದೈವಸ್ಥಾನದ ಜಾತ್ರಾ ಮಹೋತ್ಸವ ಸೋಮವಾರ ನಡೆಯಿತು. ಹಳೆಯಂಗಡಿ ಸಮೀಪದ ಚೇಳಾಯರು ಖಂಡಿಗೆ ಧರ್ಮರಸು ಶ್ರೀ ಉಳ್ಳಾಯ ದೈವಸ್ಥಾನದ ಜಾತ್ರೆ ಮೇಷ ಸಂಕ್ರಮಣದ ದಿನದಂದು ನಡೆಯುವ ವಾಡಿಕೆಯಿದೆ. ಅಪಾರ ಸಂಖ್ಯೆಯಲ್ಲಿ ಜಾತ್ರೆಯಲ್ಲಿ ಭಾಗವಹಿಸುವ ಭಕ್ತರು ನಂದಿನಿ ನದಿಯಲ್ಲಿ ಮೀನು ಹಿಡಿಯುವ ಸಂಪ್ರದಾಯ ಹಿಂದಿನಿಂದಲೂ ನಡೆದುಕೊಂಡು ಬಂದಿದೆ.