ಸಾಹಿತಿ ಯು.ಎ. ಖಾಸಿಮ್ ಉಳ್ಳಾಲ ನಿಧನ

ಮಂಗಳೂರು:ಸಾಹಿತಿ ಯು.ಎ. ಖಾಸಿಮ್ ಉಳ್ಳಾಲ (74) ಸೋಮವಾರ ಇಲ್ಲಿ ನಿಧನರಾದರು. ಅವರಿಗೆ ಪತ್ನಿ, ನಾಲ್ವರು ಪುತ್ರರು, ಮೂವರು ಪುತ್ರಿ ಯರು ಇದ್ದಾರೆ. ಬ್ಯಾರಿ ಮತ್ತು ಕನ್ನಡ ಭಾಷೆಯಲ್ಲಿ ಅನೇಕ ಕೃತಿಗಳನ್ನು ರಚಿಸಿ ದ್ದಾರೆ. ಬ್ಯಾರಿ ಸಾಹಿತ್ಯ ಚಳವಳಿಯ ರೂವಾರಿಗಳಲ್ಲಿ ಒಬ್ಬರಾಗಿದ್ದು ಉಳ್ಳಾಲ, ಬ್ಯಾರಿ ಆಂದೋಲನದ ಮುಂಚೂಣಿಯಲ್ಲಿದ್ದರು.
ಬ್ಯಾರಿ ಸಾಹಿತ್ಯ ಅಕಾಡೆಮಿ ಸದಸ್ಯ ರಾಗಿ, ಕೇಂದ್ರ ಬ್ಯಾರಿ ಪರಿಷತ್, ಬ್ಯಾರಿ ಸಾಹಿತ್ಯ, ಸಾಂಸ್ಕೃತಿಕ ಸಂಘದ ಪದಾಧಿ ಕಾರಿಯಾಗಿ ಕಾರ್ಯನಿರ್ವಹಿಸಿದ್ದರು. ಸೋಮವಾರ ಅಂತ್ಯಕ್ರಿಯೆ ನೆರವೇರಿತು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.