ಹೊಸ ಉದ್ಯಮಗಳು ಆರಂಭವಾಗುವಾಗ ಪರಿಸರ ರಕ್ಷಣೆ ಹಿನ್ನೆಲೆಯಲ್ಲಿ ಸ್ಥಳೀಯ ವಿರೋಧ, ಉದ್ಯೋಗದ ಬೇಡಿಕೆಗಳು ಬರುವುದು ಸಹಜ. ಕೆಐಒಸಿಎಲ್ ಇವೆರಡೂ ಬೇಡಿಕೆಗಳನ್ನು ಪೂರೈಸಿದ ಸಂಸ್ಥೆಯಾಗಿದೆ. ಕೋವಿಡ್ ಸಾಂಕ್ರಾಮಿಕದ ಸಂಕಷ್ಟದ ಕಾಲದಲ್ಲಿ ಮೂರು ಕಡೆಗಳಲ್ಲಿ ಸರ್ಕಾರಿ ಆಸ್ಪತ್ರೆಗೆ ಆಮ್ಲಜನಕ ಘಟಕ, ವಿವಿಧೆಡೆ ಕಿಟ್, ಆಂಬುಲೆನ್ಸ್ ನೀಡುವ ಮೂಲಕ ನೆರವಾಗಿದೆ. ಪ್ರಸ್ತುತ ಆರೋಗ್ಯ, ಸೇವೆ, ರಕ್ಷಣೆ, ಶಿಕ್ಷಣ ಹೀಗೆ ವಿಂಗಡಣೆ ಮಾಡಿಕೊಂಡು ಸಿಎಸ್ಆರ್ ನಿಧಿಯನ್ನು ವಿತರಿಸಿದೆ ಎಂದು ಶ್ಲಾಘಿಸಿದರು.