<p><strong>ಮಂಗಳೂರು</strong>: ಬಳ್ಳಾರಿ ಜಿಲ್ಲೆಯ ದೇವದಾರಿನಲ್ಲಿ ಕಬ್ಬಿಣದ ಅದಿರು ಗಣಿಗಾರಿಕೆ ನಡೆಸಲು ಕೆಐಒಸಿಎಲ್ಗೆ ಅನುಮತಿ ದೊರಕಿದೆ. ಈ ಆರ್ಥಿಕ ವರ್ಷದಲ್ಲಿ ಗಣಿಗಾರಿಕೆ ಆರಂಭವಾಗಲಿದೆ ಎಂದು ಕೆಐಒಸಿಎಲ್ ಅಧ್ಯಕ್ಷ, ವ್ಯವಸ್ಥಾಪಕ ನಿರ್ದೇಶಕ ಎಂ.ವಿ. ಸುಬ್ಬರಾವ್ ತಿಳಿಸಿದರು.</p>.<p>ಪತ್ರಿಕಾಗೋಷ್ಠಿಯಲ್ಲಿ ಈ ಮಾಹಿತಿ ನೀಡಿದ ಅವರು, ‘₹ 1,500 ಕೋಟಿಗಳ ಐದು ವರ್ಷಗಳ ಯೋಜನೆ ಇದಾಗಿದ್ದು, ಕೇಂದ್ರ ಪರಿಸರ ಮತ್ತು ಅರಣ್ಯ ಸಚಿವಾಲಯವು 401 ಹೆಕ್ಟೇರ್ ಪ್ರದೇಶದಲ್ಲಿ ಗಣಿ ಗಾರಿಕೆ ನಡೆಸಲು ಪ್ರಥಮ ಹಂತದ ಅನುಮತಿ ನೀಡಿದೆ’ ಎಂದರು.</p>.<p>5 ವರ್ಷಗಳ ಯೋಜನೆ ಯಡಿ ಸುಮಾರು ಒಂದು ಸಾವಿರ ಮಂದಿಗೆ ಉದ್ಯೋಗ ದೊರ ಕಲಿದೆ. ಕೆಐಒಸಿಎಲ್ನಿಂದ 15 ವರ್ಷ ಗಳ ಬಳಿಕ ರಾಜ್ಯದಲ್ಲಿ ಮತ್ತೆ ಗಣಿಗಾರಿಕೆ ಆರಂಭ ಆಗಲಿದೆ ಎಂದು ಹೇಳಿದರು.</p>.<p>4 ವರ್ಷಗಳಲ್ಲಿ ಉತ್ತಮ ಸಾಧನೆ ತೋರಿದ್ದು, ಕೋವಿಡ್ ಸಂಕಷ್ಟದ ನಡುವೆಯೂ ಕಂಪನಿಯು ಈ ಬಾರಿ<br />₹ 2,477.83 ಕೋಟಿ ಆದಾಯ ಗಳಿಸಿದೆ. ತೆರಿಗೆ ಬಳಿಕ ₹ 301.17 ಕೋಟಿ ಲಾಭ ಗಳಿಸಿದೆ ಎಂದರು.</p>.<p>ಸಂಸ್ಥೆಯ ಸಿಬ್ಬಂದಿ, ಹೊರ ಗುತ್ತಿಗೆ ಸಿಬ್ಬಂದಿ, ವಲಸೆ ಕಾರ್ಮಿಕರು ಹಾಗೂ ಅವರ ಕುಟುಂಬದವರು ಸೇರಿ ಶೇ 99ರಷ್ಟು ಮಂದಿಗೆ ಲಸಿಕೆ ನೀಡಲಾಗಿದೆ. ಸಿಆರ್ಎಸ್ ನಿಧಿಯಿಂದ ವೆನ್ಲಾಕ್ ಆಸ್ಪತ್ರೆಗೆ ಆಂಬುಲೆನ್ಸ್ ನೀಡಿದೆ ಎಂದರು.</p>.<p>ಕೆಐಒಸಿಎಲ್ನ (ಉತ್ಪಾದನೆ) ನಿರ್ದೇಶಕ ಭಾಸ್ಕರ್ ರೆಡ್ಡಿ, ಪಿಆರ್ಒ ಮುರುಗೇಶ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು</strong>: ಬಳ್ಳಾರಿ ಜಿಲ್ಲೆಯ ದೇವದಾರಿನಲ್ಲಿ ಕಬ್ಬಿಣದ ಅದಿರು ಗಣಿಗಾರಿಕೆ ನಡೆಸಲು ಕೆಐಒಸಿಎಲ್ಗೆ ಅನುಮತಿ ದೊರಕಿದೆ. ಈ ಆರ್ಥಿಕ ವರ್ಷದಲ್ಲಿ ಗಣಿಗಾರಿಕೆ ಆರಂಭವಾಗಲಿದೆ ಎಂದು ಕೆಐಒಸಿಎಲ್ ಅಧ್ಯಕ್ಷ, ವ್ಯವಸ್ಥಾಪಕ ನಿರ್ದೇಶಕ ಎಂ.ವಿ. ಸುಬ್ಬರಾವ್ ತಿಳಿಸಿದರು.</p>.<p>ಪತ್ರಿಕಾಗೋಷ್ಠಿಯಲ್ಲಿ ಈ ಮಾಹಿತಿ ನೀಡಿದ ಅವರು, ‘₹ 1,500 ಕೋಟಿಗಳ ಐದು ವರ್ಷಗಳ ಯೋಜನೆ ಇದಾಗಿದ್ದು, ಕೇಂದ್ರ ಪರಿಸರ ಮತ್ತು ಅರಣ್ಯ ಸಚಿವಾಲಯವು 401 ಹೆಕ್ಟೇರ್ ಪ್ರದೇಶದಲ್ಲಿ ಗಣಿ ಗಾರಿಕೆ ನಡೆಸಲು ಪ್ರಥಮ ಹಂತದ ಅನುಮತಿ ನೀಡಿದೆ’ ಎಂದರು.</p>.<p>5 ವರ್ಷಗಳ ಯೋಜನೆ ಯಡಿ ಸುಮಾರು ಒಂದು ಸಾವಿರ ಮಂದಿಗೆ ಉದ್ಯೋಗ ದೊರ ಕಲಿದೆ. ಕೆಐಒಸಿಎಲ್ನಿಂದ 15 ವರ್ಷ ಗಳ ಬಳಿಕ ರಾಜ್ಯದಲ್ಲಿ ಮತ್ತೆ ಗಣಿಗಾರಿಕೆ ಆರಂಭ ಆಗಲಿದೆ ಎಂದು ಹೇಳಿದರು.</p>.<p>4 ವರ್ಷಗಳಲ್ಲಿ ಉತ್ತಮ ಸಾಧನೆ ತೋರಿದ್ದು, ಕೋವಿಡ್ ಸಂಕಷ್ಟದ ನಡುವೆಯೂ ಕಂಪನಿಯು ಈ ಬಾರಿ<br />₹ 2,477.83 ಕೋಟಿ ಆದಾಯ ಗಳಿಸಿದೆ. ತೆರಿಗೆ ಬಳಿಕ ₹ 301.17 ಕೋಟಿ ಲಾಭ ಗಳಿಸಿದೆ ಎಂದರು.</p>.<p>ಸಂಸ್ಥೆಯ ಸಿಬ್ಬಂದಿ, ಹೊರ ಗುತ್ತಿಗೆ ಸಿಬ್ಬಂದಿ, ವಲಸೆ ಕಾರ್ಮಿಕರು ಹಾಗೂ ಅವರ ಕುಟುಂಬದವರು ಸೇರಿ ಶೇ 99ರಷ್ಟು ಮಂದಿಗೆ ಲಸಿಕೆ ನೀಡಲಾಗಿದೆ. ಸಿಆರ್ಎಸ್ ನಿಧಿಯಿಂದ ವೆನ್ಲಾಕ್ ಆಸ್ಪತ್ರೆಗೆ ಆಂಬುಲೆನ್ಸ್ ನೀಡಿದೆ ಎಂದರು.</p>.<p>ಕೆಐಒಸಿಎಲ್ನ (ಉತ್ಪಾದನೆ) ನಿರ್ದೇಶಕ ಭಾಸ್ಕರ್ ರೆಡ್ಡಿ, ಪಿಆರ್ಒ ಮುರುಗೇಶ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>