ಈ ಸಂದರ್ಭದಲ್ಲಿ ಮಾತನಾಡಿದ ಕೆಎಂಸಿ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಆನಂದ್ ವೇಣುಗೋಪಾಲ್, ಬಹಳಷ್ಟು ಜನರು ರಸ್ತೆ ಅಪಘಾತಗಳಲ್ಲಿ ಗಾಯಗೊಳ್ಳುವುದು ಅಥವಾ ಜೀವ ಕಳೆದುಕೊಳ್ಳುತ್ತಿದ್ದು, ಅವರ ಜೀವಗಳನ್ನು ಉಳಿಸುವಲ್ಲಿ ಆಂಬುಲೆನ್ಸ್ಗಳು ಪ್ರಮುಖ ಪಾತ್ರವಹಿಸುತ್ತವೆ. ಆದರೆ, ಆಂಬುಲೆನ್ಸ್ಗಳ ಕಡೆಗೆ ಜನರು ನಿರ್ಲಕ್ಷ್ಯ ವಹಿಸುತ್ತಾರೆ. ಅನೇಕ ಬಾರಿ ಅವುಗಳು ಮುಂದೆ ಸಾಗಲು ದಾರಿ ಮಾಡಿಕೊಡುವುದಿಲ್ಲ. ಆಂಬುಲೆನ್ಸ್ವೊಂದಕ್ಕೆ ದಾರಿ ಬಿಟ್ಟುಕೊಡುವುದು ಎಷ್ಟು ಗಂಭೀರ ಮತ್ತು ಪ್ರಮುಖ ಎಂಬುದರ ಬಗ್ಗೆ ಜನರಲ್ಲಿ ಸಂವೇದನೆ ಮೂಡಿಸುವುದು ಅತ್ಯಂತ ಮುಖ್ಯವಾಗಿದೆ. ಜನರು ಇದನ್ನು ಅರ್ಥ ಮಾಡಿಕೊಂಡರೆ ಈ ನಿಟ್ಟಿನಲ್ಲಿ ಅರ್ಧ ಹೋರಾಟ ಗೆದ್ದಂತೆ’ ಎಂದು ಅಭಿಪ್ರಾಯಪಟ್ಟರು.