ಉಪ ವೈದ್ಯಕೀಯ ಅಧೀಕ್ಷಕ ಡಾ. ದೀಪಕ್ ಮಡಿ ಮಾತನಾಡಿ, ಉದ್ಘಾಟನಾ ಕಾರ್ಯಕ್ರಮದಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಸಂಸದ ನಳಿನ್ ಕುಮಾರ್ ಕಟೀಲ್, ಸ್ಪೀಕರ್ ಯು.ಟಿ. ಖಾದರ್, ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು, ಶಾಸಕರಾದ ವೇದವ್ಯಾಸ ಕಾಮತ್, ಡಾ. ಭರತ್ ಶೆಟ್ಟಿ, ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಭಾಗವಹಿಸುವರು. ಮಾಹೆ ಪ್ರೊ ಚಾನ್ಸಲರ್ ಎಚ್.ಎಸ್. ಬಲ್ಲಾಳ್ ಅಧ್ಯಕ್ಷತೆ ವಹಿಸುವರು ಎಂದರು. ಶಸ್ತ್ರಚಿಕಿತ್ಸಾ ವಿಭಾಗದ ಮುಖ್ಯ ವ್ಯವಸ್ಥಾಪಕ ರವಿರಾಜ್ ಇದ್ದರು.