ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊಕ್ಕಡ: ಮಸೀದಿ ಉದ್ಘಾಟನೆಗೆ ವಿದ್ಯಾರ್ಥಿಗಳನ್ನು ಕರೆದೊಯ್ದ ಶಿಕ್ಷಕರು

ಮುಖ್ಯ ಶಿಕ್ಷಕರಿಗೆ ರಜೆ: ವಿಚಾರಣೆಗೆ ಆದೇಶ
Last Updated 24 ಮಾರ್ಚ್ 2021, 19:30 IST
ಅಕ್ಷರ ಗಾತ್ರ

ಮಂಗಳೂರು: ಬೆಳ್ತಂಗಡಿ ತಾಲ್ಲೂಕಿನ ಕೊಕ್ಕಡದ ಮಸೀದಿ ಉದ್ಘಾಟನೆಗೆ ಶಾಲಾ ಮಕ್ಕಳನ್ನು ಕರೆದೊಯ್ದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಭಾರ ಮುಖ್ಯ ಶಿಕ್ಷಕರನ್ನು 10 ದಿನ ರಜೆ ಮೇಲೆ ಕಳುಹಿಸಲಾಗಿದೆ. ಈ ಬಗ್ಗೆ ವಿಚಾರಣೆ ನಡೆಸಲು ಸಮಗ್ರ ಶಿಕ್ಷಣದ ಜಿಲ್ಲಾ ಉಪ ಯೋಜನಾ ಸಮನ್ವಯಾಧಿಕಾರಿಗೆ ಸೂಚನೆ ನೀಡಲಾಗಿದೆ.

ಕೊಕ್ಕಡದಲ್ಲಿ ನವೀಕರಣಗೊಂಡ ಮಸೀದಿಯ ಉದ್ಘಾಟನೆ ಮಾ.19ರಂದು ನಡೆದಿತ್ತು. ಕಾರ್ಯಕ್ರಮಕ್ಕೆ ಕೊಕ್ಕಡ ಪ್ರೌಢಶಾಲೆಯ ವಿದ್ಯಾರ್ಥಿಗಳನ್ನು ಶಿಕ್ಷಕರು ಕರೆದುಕೊಂಡು ಹೋಗಿದ್ದು, ಈ ಬಗ್ಗೆ ವಿವಾದ ಉಂಟಾಗಿತ್ತು. ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ಚರ್ಚೆ ನಡೆಯುತ್ತಿದೆ.

‘ಶಾಲಾ ಅವಧಿಯಲ್ಲಿ ಮಾರ್ಗಸೂಚಿ ಉಲ್ಲಂಘಿಸಿ ವಿದ್ಯಾರ್ಥಿಗಳನ್ನು ಮಸೀದಿ ಉದ್ಘಾಟನೆಗೆ ಕಳುಹಿಸಿರುವ ಬಗ್ಗೆ ಸಾರ್ವಜನಿಕ ವಲಯದಲ್ಲಿ ಹಾಗೂ ಸಾಮಾಜಿಕ ಜಾಲತಾಣದಲ್ಲಿ ವಿರೋಧ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಪ್ರಭಾರ ಮುಖ್ಯ ಶಿಕ್ಷಕ ದಿನೇಶ್‌ ಅವರನ್ನು 10 ದಿನ ರಜೆಯ ಮೇಲೆ ಕಳುಹಿಸಲಾಗಿದೆ. ವಿಚಾರಣಾ ವರದಿ ಬಂದ ನಂತರ ನಿಯಮಾನುಸಾರ ಕ್ರಮ ಕೈಗೊಳ್ಳಲಾಗುವುದು’ ಎಂದು ಡಿಡಿಪಿಐ ಮಲ್ಲೇಸ್ವಾಮಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT