<p><strong>ಮೂಡುಬಿದಿರೆ</strong>: ಕ್ಯಾಲಿಕಟ್ ವಿಶ್ವವಿದ್ಯಾಲಯದಲ್ಲಿ ಜ.29ರಿಂದ 31ರ ವರೆಗೆ ನಡೆದ ಅಖಿಲ ಭಾರತ ಅಂತರ ವಿಶ್ವವಿದ್ಯಾಲಯಗಳ ಪುರುಷರ ಕೊಕ್ಕೊ ಟೂರ್ನಿಯಲ್ಲಿ ಮಂಗಳೂರು ವಿಶ್ವವಿದ್ಯಾಲಯವು ದ್ವಿತೀಯ ರನ್ನರ್ ಅಪ್ ಆಗಿದ್ದು, ಮಂಗಳೂರು ವಿಶ್ವವಿದ್ಯಾಲಯವನ್ನು ಪ್ರತಿನಿಧಿಸಿದ 15 ಕ್ರೀಡಾಪಟುಗಳ ಪೈಕಿ 13 ಮಂದಿ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿಗಳು.</p>.<p>ಈ ಟೂರ್ನಿಯಲ್ಲಿ ಕ್ಯಾಲಿಕಟ್ ವಿಶ್ವವಿದ್ಯಾಲಯ ಪ್ರಥಮ, ಔರಂಗಬಾದ್ನ ಬಾಬಾ ಸಾಹೇಬ್ ಅಂಬೇಡ್ಕರ್ ಮರಾಠ್ವಾಡ ವಿಶ್ವವಿದ್ಯಾಲಯ ದ್ವಿತೀಯ ಸ್ಥಾನ ಗೆದ್ದುಕೊಂಡಿದೆ.</p>.<p>ಚೆನ್ನೈನಲ್ಲಿ ಜ.26ರಿಂದ 30ರವರೆಗೆ ಯುವ ಖೇಲೋ ಇಂಡಿಯ ಕೊಕ್ಕೊ ಟೂರ್ನಿಯಲ್ಲಿ ಯುವಕರ ಹಾಗೂ <br> ಯುವತಿಯರ ವಿಭಾಗದ ರಾಜ್ಯ ತಂಡವನ್ನು ಆಳ್ವಾಸ್ ಕಾಲೇಜಿನ ತಲಾ ಇಬ್ಬರು ಪ್ರತಿನಿಧಿಸಿದ್ದಾರೆ.</p>.<p>ಯುವಕರ ತಂಡವನ್ನು ಆಳ್ವಾಸ್ ಕಾಲೇಜಿನ ಪ್ರಥಮ ಪಿಯು ವಿದ್ಯಾರ್ಥಿ ಸಂಗೀತ್ ಗೌಡ, ದ್ವಿತೀಯ ಪಿಯು ವಿದ್ಯಾರ್ಥಿ ರಮೇಶ್ ಪ್ರತಿನಿಧಿಸಿದ್ದು, ಕರ್ನಾಟಕ ತಂಡವು ತೃತೀಯ ಸ್ಥಾನ ಪಡೆದಿದೆ.</p>.<p>ಯುವತಿಯರ ತಂಡದಲ್ಲಿ ಆಳ್ವಾಸ್ ಕಾಲೇಜಿನ ಪ್ರಥಮ ಬಿಎ ವಿದ್ಯಾರ್ಥಿನಿ ಹಿಮಾನಿ, ಪ್ರಥಮ ಪಿಯು ವಿದ್ಯಾರ್ಥಿನಿ ಅಪೂರ್ವ ಪ್ರತಿನಿಧಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೂಡುಬಿದಿರೆ</strong>: ಕ್ಯಾಲಿಕಟ್ ವಿಶ್ವವಿದ್ಯಾಲಯದಲ್ಲಿ ಜ.29ರಿಂದ 31ರ ವರೆಗೆ ನಡೆದ ಅಖಿಲ ಭಾರತ ಅಂತರ ವಿಶ್ವವಿದ್ಯಾಲಯಗಳ ಪುರುಷರ ಕೊಕ್ಕೊ ಟೂರ್ನಿಯಲ್ಲಿ ಮಂಗಳೂರು ವಿಶ್ವವಿದ್ಯಾಲಯವು ದ್ವಿತೀಯ ರನ್ನರ್ ಅಪ್ ಆಗಿದ್ದು, ಮಂಗಳೂರು ವಿಶ್ವವಿದ್ಯಾಲಯವನ್ನು ಪ್ರತಿನಿಧಿಸಿದ 15 ಕ್ರೀಡಾಪಟುಗಳ ಪೈಕಿ 13 ಮಂದಿ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿಗಳು.</p>.<p>ಈ ಟೂರ್ನಿಯಲ್ಲಿ ಕ್ಯಾಲಿಕಟ್ ವಿಶ್ವವಿದ್ಯಾಲಯ ಪ್ರಥಮ, ಔರಂಗಬಾದ್ನ ಬಾಬಾ ಸಾಹೇಬ್ ಅಂಬೇಡ್ಕರ್ ಮರಾಠ್ವಾಡ ವಿಶ್ವವಿದ್ಯಾಲಯ ದ್ವಿತೀಯ ಸ್ಥಾನ ಗೆದ್ದುಕೊಂಡಿದೆ.</p>.<p>ಚೆನ್ನೈನಲ್ಲಿ ಜ.26ರಿಂದ 30ರವರೆಗೆ ಯುವ ಖೇಲೋ ಇಂಡಿಯ ಕೊಕ್ಕೊ ಟೂರ್ನಿಯಲ್ಲಿ ಯುವಕರ ಹಾಗೂ <br> ಯುವತಿಯರ ವಿಭಾಗದ ರಾಜ್ಯ ತಂಡವನ್ನು ಆಳ್ವಾಸ್ ಕಾಲೇಜಿನ ತಲಾ ಇಬ್ಬರು ಪ್ರತಿನಿಧಿಸಿದ್ದಾರೆ.</p>.<p>ಯುವಕರ ತಂಡವನ್ನು ಆಳ್ವಾಸ್ ಕಾಲೇಜಿನ ಪ್ರಥಮ ಪಿಯು ವಿದ್ಯಾರ್ಥಿ ಸಂಗೀತ್ ಗೌಡ, ದ್ವಿತೀಯ ಪಿಯು ವಿದ್ಯಾರ್ಥಿ ರಮೇಶ್ ಪ್ರತಿನಿಧಿಸಿದ್ದು, ಕರ್ನಾಟಕ ತಂಡವು ತೃತೀಯ ಸ್ಥಾನ ಪಡೆದಿದೆ.</p>.<p>ಯುವತಿಯರ ತಂಡದಲ್ಲಿ ಆಳ್ವಾಸ್ ಕಾಲೇಜಿನ ಪ್ರಥಮ ಬಿಎ ವಿದ್ಯಾರ್ಥಿನಿ ಹಿಮಾನಿ, ಪ್ರಥಮ ಪಿಯು ವಿದ್ಯಾರ್ಥಿನಿ ಅಪೂರ್ವ ಪ್ರತಿನಿಧಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>