ಕಾರು ಕೊಲ್ಯ- ಅಡ್ಕ ಬಳಿ ರಸ್ತೆ ವಿಭಜಕವನ್ನು ಏರಿ, ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದಿದ್ದು, ಸಂಪೂರ್ಣ ನುಜ್ಜುಗುಜ್ಜಾಗಿದೆ. ಚಾಲಕ ಬಷಾರ ಅಹಮ್ಮದ್ ತಲೆ ಹಾಗೂ ದೇಹ ಜಜ್ಜಿಹೋಗಿದ್ದು, ಅವರು ಸ್ಥಳದಲ್ಲೇ ಅಸುನೀಗಿದ್ದಾರೆ. ಉಳಿದ ಮೂವರು ಗಾಯಾಳುಗಳನ್ನು ಸ್ಥಳೀಯರು ಕಾರಿನಿಂದ ಹೊರ ತೆಗೆದು ಆಸ್ಪತ್ರೆಗೆ ಕರೆದೊಯ್ದರು. ಒಬ್ಬ ಯುವತಿಯನ್ನು ಕಾರಿನಲ್ಲಿ ಪ್ರಶಾಂತ್ ಗಟ್ಟಿ ಎಂಬವರು ಎ.ಜೆ ಆಸ್ಪತ್ರೆಗೆ ಕರೆದೊಯ್ದರು. ಇನ್ನೊಬ್ಬ ಯುವತಿಯನ್ನು ಟೆಂಪೊ ಟ್ರಾವೆಲರ್ ವಾಹನದಲ್ಲಿ ಕರೆದೊಯ್ದು ಅದೇ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಂಭೀರವಾಗಿ ಗಾಯಗೊಂಡ ಪ್ರಯಾಣಿಕನನ್ನು ದೇರಳಕಟ್ಟೆ ಕೆ.ಎಸ್ ಹೆಗ್ಡೆ ಆಸ್ಪತ್ರೆಗೆ ದಾಖಲಿಸಲಾಗಿದೆ.