<p>ಉಳ್ಳಾಲ: ಪ್ಲಾಸ್ಟಿಕ್ ತ್ಯಾಜ್ಯ ಸಮಸ್ಯೆಯ ಬಗ್ಗೆ ಈಗಾಗಲೇ ಜಾಗೃತಿ ಮೂಡಿಸಲಾಗುತ್ತಿದ್ದರೂ ರಸ್ತೆ ಬದಿಯಲ್ಲಿ ಪ್ಲಾಸ್ಟಿಕ್ ತ್ಯಾಜ್ಯ ಎಸೆಯಲಾಗುತ್ತಿದೆ. ಕೊಣಾಜೆ ಗ್ರಾಮ ಪಂಚಾಯಿತಿ ಈ ಬಗ್ಗೆ ಕಠಿಣ ಕ್ರಮ ಕೈಗೊಳ್ಳಲು ಮುಂದಾಗಿದ್ದು, ಕಸ ಎಸೆಯುವವರ ವಿರುದ್ಧ ಎಫ್ಐಆರ್ ಹಾಗೂ ₹ 5 ಸಾವಿರ ದಂಡ ವಿಧಿಸಲಾಗುವುದು. ಪ್ಲಾಸ್ಟಿಕ್ ಎಸೆಯುವರನ್ನು ಪತ್ತೆಹಚ್ಚಿದವರಿಗೆ ಬಹುಮಾನ ನೀಡುವ ಯೋಜನೆ ರೂಪಿಸಲಾಗಿದೆ ಎಂದು ಕೊಣಾಜೆ ಪಿಡಿಒ ರಜನಿ ಹೇಳಿದರು.</p>.<p>ಮುಡಿಪುವಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಎನ್ಎಸ್ಎಸ್ ವಿದ್ಯಾರ್ಥಿಗಳಿಂದ ಕೊಣಾಜೆ ಗ್ರಾಮದ ನಡುಪದವಿನ ಸಸ್ಯೋದ್ಯಾನದ ಬಳಿ ನಡೆದ ಪ್ಲಾಸ್ಟಿಕ್ ತ್ಯಾಜ್ಯ ಸ್ವಚ್ಛತೆ ಹಾಗೂ ಜಾಗೃತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಮುಖಂಡ ನಾಸಿರ್ ಕೆ.ಕೆ.ಎಸ್. ಮಾತನಾಡಿದರು.</p>.<p>ಮುಡಿಪು ಕಾಲೇಜಿನ ಎನ್ಎಸ್ಎಸ್ ಶಿಬಿರಾಧಿಕಾರಿ ತನುಜಾ ಮಾತನಾಡಿ, ಪರಿಸರ ಸ್ವಚ್ಛತೆಯ ಬಗ್ಗೆ ಸ್ವಯಂ ಜಾಗೃತಿ ಮೂಡಬೇಕಾಗಿದೆ ಎಂದರು.</p>.<p>ಕೊಣಾಜೆ ಪಂಚಾಯಿತಿ ಕಾರ್ಯದರ್ಶಿ ಚಿತ್ರಾ, ಮುಖಂಡರಾದ ಜಗದೀಶ್ ಆಳ್ವ ಕುವೆತ್ತಬೈಲ್, ಮಂಗಳೂರು ವಿವಿಯ ಗಿರೀಶ್ ಮಯ್ಯ, ನವೀನ್ ಚಂದ್ರ, ಸ್ಥಳೀಯರಾದ ಇಸ್ಮಾಯಿಲ್ ನಡುಪದವು, ಜಗದೀಶ್ ನಡುಪದವು, ಅಬ್ದುಲ್ ಅಝೀಜ್, ವಿಶು, ಅಶ್ರಫ್, ತಾರಾನಾಥ, ಹಸೈನಾರ್ ಕಲ್ಲರ್ಬೆ ಭಾಗವಹಿಸಿದ್ದರು.</p>.<p>ಪತ್ರಕರ್ತ ಸತೀಶ್ ಕೊಣಾಜೆ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಶಿವಪ್ರಕಾಶ್ ಭಟ್ ವಂದಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260410-29-1931627241</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಉಳ್ಳಾಲ: ಪ್ಲಾಸ್ಟಿಕ್ ತ್ಯಾಜ್ಯ ಸಮಸ್ಯೆಯ ಬಗ್ಗೆ ಈಗಾಗಲೇ ಜಾಗೃತಿ ಮೂಡಿಸಲಾಗುತ್ತಿದ್ದರೂ ರಸ್ತೆ ಬದಿಯಲ್ಲಿ ಪ್ಲಾಸ್ಟಿಕ್ ತ್ಯಾಜ್ಯ ಎಸೆಯಲಾಗುತ್ತಿದೆ. ಕೊಣಾಜೆ ಗ್ರಾಮ ಪಂಚಾಯಿತಿ ಈ ಬಗ್ಗೆ ಕಠಿಣ ಕ್ರಮ ಕೈಗೊಳ್ಳಲು ಮುಂದಾಗಿದ್ದು, ಕಸ ಎಸೆಯುವವರ ವಿರುದ್ಧ ಎಫ್ಐಆರ್ ಹಾಗೂ ₹ 5 ಸಾವಿರ ದಂಡ ವಿಧಿಸಲಾಗುವುದು. ಪ್ಲಾಸ್ಟಿಕ್ ಎಸೆಯುವರನ್ನು ಪತ್ತೆಹಚ್ಚಿದವರಿಗೆ ಬಹುಮಾನ ನೀಡುವ ಯೋಜನೆ ರೂಪಿಸಲಾಗಿದೆ ಎಂದು ಕೊಣಾಜೆ ಪಿಡಿಒ ರಜನಿ ಹೇಳಿದರು.</p>.<p>ಮುಡಿಪುವಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಎನ್ಎಸ್ಎಸ್ ವಿದ್ಯಾರ್ಥಿಗಳಿಂದ ಕೊಣಾಜೆ ಗ್ರಾಮದ ನಡುಪದವಿನ ಸಸ್ಯೋದ್ಯಾನದ ಬಳಿ ನಡೆದ ಪ್ಲಾಸ್ಟಿಕ್ ತ್ಯಾಜ್ಯ ಸ್ವಚ್ಛತೆ ಹಾಗೂ ಜಾಗೃತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಮುಖಂಡ ನಾಸಿರ್ ಕೆ.ಕೆ.ಎಸ್. ಮಾತನಾಡಿದರು.</p>.<p>ಮುಡಿಪು ಕಾಲೇಜಿನ ಎನ್ಎಸ್ಎಸ್ ಶಿಬಿರಾಧಿಕಾರಿ ತನುಜಾ ಮಾತನಾಡಿ, ಪರಿಸರ ಸ್ವಚ್ಛತೆಯ ಬಗ್ಗೆ ಸ್ವಯಂ ಜಾಗೃತಿ ಮೂಡಬೇಕಾಗಿದೆ ಎಂದರು.</p>.<p>ಕೊಣಾಜೆ ಪಂಚಾಯಿತಿ ಕಾರ್ಯದರ್ಶಿ ಚಿತ್ರಾ, ಮುಖಂಡರಾದ ಜಗದೀಶ್ ಆಳ್ವ ಕುವೆತ್ತಬೈಲ್, ಮಂಗಳೂರು ವಿವಿಯ ಗಿರೀಶ್ ಮಯ್ಯ, ನವೀನ್ ಚಂದ್ರ, ಸ್ಥಳೀಯರಾದ ಇಸ್ಮಾಯಿಲ್ ನಡುಪದವು, ಜಗದೀಶ್ ನಡುಪದವು, ಅಬ್ದುಲ್ ಅಝೀಜ್, ವಿಶು, ಅಶ್ರಫ್, ತಾರಾನಾಥ, ಹಸೈನಾರ್ ಕಲ್ಲರ್ಬೆ ಭಾಗವಹಿಸಿದ್ದರು.</p>.<p>ಪತ್ರಕರ್ತ ಸತೀಶ್ ಕೊಣಾಜೆ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಶಿವಪ್ರಕಾಶ್ ಭಟ್ ವಂದಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260410-29-1931627241</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>