ಕೊಂಕಣಿ ಭಾಷೆಗಾಗಿ ದುಡಿದ ರಾಮದಾಸ್ ಗುಲ್ವಾಡಿ ಅವರಿಗೆ ‘ಜೀವಮಾನ ಪ್ರಶಸ್ತಿ’, ನಾಟಿ ವೈದ್ಯೆಯಾದ ಕಲ್ಯಾಣಿಬಾಯಿ ನೀರ್ಕೆರೆ ಅವರಿಗೆ ‘ಜಾನಪದ ಪ್ರಶಸ್ತಿ’, ಕೊಂಕಣಿ ವಾರಪತ್ರಿಕೆ ನಡೆಸುತ್ತಿರುವ ಸಾಗರದ ಅಪ್ಪುರಾಯ ಪೈ ಅವರಿಗೆ ‘ಕೊಂಕಣಿ ಕಾರ್ಯಕರ್ತ ಪ್ರಶಸ್ತಿ’, ಕೊಂಕಣಿ ಚಿತ್ರನಟ ಕ್ಲಾನ್ವಿನ್ ಫರ್ನಾಂಡಿಸ್ ಅವರಿಗೆ ‘ಯುವ ಪ್ರಶಸ್ತಿ’ ಹಾಗೂ ಮೊದಲ ಕೊಂಕಣಿ ಕೃತಿ ಪ್ರಕಟಿಸಿದ ಕೃತಿಕಾ ಕಾಮತ್ ಅವರಿಗೆ ‘ಪುಸ್ತಕ ಪ್ರಶಸ್ತಿ’ ಘೋಷಿಸಲಾಗಿದೆ. ಈ ಗೌರವ ಪ್ರಶಸ್ತಿಯು ಸ್ಮರಣಿಕೆ, ಶಾಲು, ಫಲಕಗಳನ್ನು ಒಳಗೊಂಡಿದೆ.