<p><strong>ಮಂಗಳೂರು</strong>: ಬಿಡುಗಡೆಗೆ ಸಿದ್ಧವಾಗಿರುವ, ಸುಧೀರ್ ಅತ್ತಾವರ್ ನಿರ್ದೇಶನದ ‘ಕೊರಗಜ್ಜ’ ಸಿನಿಮಾ ಜನರಲ್ಲಿ ಆಸಕ್ತಿ ಮೂಡಿಸುತ್ತಿದೆ. ನಶಿಸಿ ಹೋಗುತ್ತಿರುವ ಪುರಾತನ ಸಂಸ್ಕೃತಿ, ಕಲೆಯನ್ನು ಈ ಸಿನಿಮಾ ಎತ್ತಿಹಿಡಿಯುತ್ತಿರುವುದು ಸಂತೋಷ ಎಂದು ಗೃಹ ಸಚಿವ ಜಿ. ಪರಮೇಶ್ವರ್ ಹೇಳಿದರು.</p>.<p>ನ.11ರಂದು ಸಿನಿಮಾ ತಾರೆಯರ ಸಮ್ಮುಖದಲ್ಲಿ ನಡೆಯಲಿರುವ ಕೊರಗಜ್ಜ ದೈವದ ಅದ್ಧುರಿ ಕೋಲ ಸೇವೆಯ ಬಗ್ಗೆ ಚರ್ಚಿಸಲು ಚಿತ್ರ ತಂಡ ಬೆಂಗಳೂರಿನಲ್ಲಿ ಭೇಟಿ ಮಾಡಿದ ವೇಳೆ ಅವರು ಮಾತನಾಡಿದರು. </p>.<p>‘ಕೆಲ ಸ್ಥಳಿಯ ಕಿಡಿಗೇಡಿಗಳು ಒಡ್ಡುತ್ತಿರುವ ಬೆದರಿಕೆ ಮತ್ತು ಚಿತ್ರೀಕರಣದ ವೇಳೆ ನಡೆದ ದಾಳಿಗಳ ಹಿನ್ನೆಲೆಯಲ್ಲಿ ಗೃಹ ಸಚಿವರನ್ನು ಭೇಟಿ ಮಾಡಲಾಯಿತು’ ಎಂದು ಚಿತ್ರತಂಡದವರು ತಿಳಿಸಿದ್ದಾರೆ.</p>.<p>ನಿರ್ದೇಶಕ ಸುಧೀರ್ ಅತ್ತಾವರ್, ನಟಿ ಭವ್ಯಾ ನಿರ್ಮಾಪಕ ತ್ರಿವಿಕ್ರಂ, ಕಾರ್ಯಕಾರಿ ನಿರ್ಮಾಪಕ ವಿದ್ಯಾಧರ್ ಶೆಟ್ಟಿ, ವಿಶೇಷ ಭದ್ರತೆ ಬಗ್ಗೆ ಮನವಿ ಮಾಡಿಕೊಂಡರು. ಗೃಹ ಸಚಿವರು ಸಕರಾತ್ಮಕವಾಗಿ ಸ್ಪಂದಿಸಿ, ಮಂಗಳೂರಿನ ಪೋಲಿಸ್ ಕಮಿಷನರ್ ಜೊತೆ ವಿಷಯ ಪ್ರಸ್ತಾಪಿಸಿದರು ಎಂದು ಪ್ರಕಟಣೆ ತಿಳಿಸಿದೆ. <br /><br /></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು</strong>: ಬಿಡುಗಡೆಗೆ ಸಿದ್ಧವಾಗಿರುವ, ಸುಧೀರ್ ಅತ್ತಾವರ್ ನಿರ್ದೇಶನದ ‘ಕೊರಗಜ್ಜ’ ಸಿನಿಮಾ ಜನರಲ್ಲಿ ಆಸಕ್ತಿ ಮೂಡಿಸುತ್ತಿದೆ. ನಶಿಸಿ ಹೋಗುತ್ತಿರುವ ಪುರಾತನ ಸಂಸ್ಕೃತಿ, ಕಲೆಯನ್ನು ಈ ಸಿನಿಮಾ ಎತ್ತಿಹಿಡಿಯುತ್ತಿರುವುದು ಸಂತೋಷ ಎಂದು ಗೃಹ ಸಚಿವ ಜಿ. ಪರಮೇಶ್ವರ್ ಹೇಳಿದರು.</p>.<p>ನ.11ರಂದು ಸಿನಿಮಾ ತಾರೆಯರ ಸಮ್ಮುಖದಲ್ಲಿ ನಡೆಯಲಿರುವ ಕೊರಗಜ್ಜ ದೈವದ ಅದ್ಧುರಿ ಕೋಲ ಸೇವೆಯ ಬಗ್ಗೆ ಚರ್ಚಿಸಲು ಚಿತ್ರ ತಂಡ ಬೆಂಗಳೂರಿನಲ್ಲಿ ಭೇಟಿ ಮಾಡಿದ ವೇಳೆ ಅವರು ಮಾತನಾಡಿದರು. </p>.<p>‘ಕೆಲ ಸ್ಥಳಿಯ ಕಿಡಿಗೇಡಿಗಳು ಒಡ್ಡುತ್ತಿರುವ ಬೆದರಿಕೆ ಮತ್ತು ಚಿತ್ರೀಕರಣದ ವೇಳೆ ನಡೆದ ದಾಳಿಗಳ ಹಿನ್ನೆಲೆಯಲ್ಲಿ ಗೃಹ ಸಚಿವರನ್ನು ಭೇಟಿ ಮಾಡಲಾಯಿತು’ ಎಂದು ಚಿತ್ರತಂಡದವರು ತಿಳಿಸಿದ್ದಾರೆ.</p>.<p>ನಿರ್ದೇಶಕ ಸುಧೀರ್ ಅತ್ತಾವರ್, ನಟಿ ಭವ್ಯಾ ನಿರ್ಮಾಪಕ ತ್ರಿವಿಕ್ರಂ, ಕಾರ್ಯಕಾರಿ ನಿರ್ಮಾಪಕ ವಿದ್ಯಾಧರ್ ಶೆಟ್ಟಿ, ವಿಶೇಷ ಭದ್ರತೆ ಬಗ್ಗೆ ಮನವಿ ಮಾಡಿಕೊಂಡರು. ಗೃಹ ಸಚಿವರು ಸಕರಾತ್ಮಕವಾಗಿ ಸ್ಪಂದಿಸಿ, ಮಂಗಳೂರಿನ ಪೋಲಿಸ್ ಕಮಿಷನರ್ ಜೊತೆ ವಿಷಯ ಪ್ರಸ್ತಾಪಿಸಿದರು ಎಂದು ಪ್ರಕಟಣೆ ತಿಳಿಸಿದೆ. <br /><br /></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>