ಮಂಗಳವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಸಂವಿಧಾನಕ್ಕೆ ಧಕ್ಕೆ ಬಂದಿದೆ ಎಂದು ಅಪಪ್ರಚಾರ ಮಾಡಿ, ಕೇಂದ್ರ ಸರ್ಕಾರವನ್ನು ದೂಷಣೆ ಮಾಡಲು ಕೋಟ್ಯಂತರ ರೂಪಾಯಿ ಸರ್ಕಾರಿ ಹಣ ಖರ್ಚಿನಲ್ಲಿ ಸಮಾವೇಶ ಮಾಡಿದ್ದಾರೆ. ಸಿದ್ದರಾಮಯ್ಯ ಅವರು ರಾಜಕಾರಣಕ್ಕಿಂತ ರಾಷ್ಟ್ರೀಯತೆ, ಸಂವಿಧಾನದ ಕಡೆಗೆ ಗಮನ ಕೊಡಲಿ. ಸಂವಿಧಾನವನ್ನು ರಾಜಕೀಯಗೊಳಿಸುವ ಕೆಲಸ ಬಿಡಲಿ’ ಎಂದರು.