ಇಲ್ಲಿ ಸುದ್ದಿಗೋಷ್ಠಿಯಲ್ಲಿ ಸೋಮವಾರ ಮಾತನಾಡಿದ ಅವರು, ‘ಬೆಂಗಳೂರಿನ ರಾಮೇಶ್ವರ ಕೆಫೆ ಹೋಟೆಲ್ನಲ್ಲಿ ಬಾಂಬ್ ಸ್ಫೋಟ ಪ್ರಕರಣದ ಆರೋಪಿಯನ್ನು ಬಂಧಿಸಲು ಸರ್ಕಾರಕ್ಕೆ ತರಾತುರಿ ಇದ್ದಂತೆ ತೋರುತ್ತಿಲ್ಲ. ಈ ಘಟನೆಯ ಬಳಿಕ ಗ್ರಾಹಕರು ಯಾವುದೇ ಹೋಟೆಲ್ಗೆ, ಮಾರುಕಟ್ಟೆಗೆ ಹೋಗುವುದಕ್ಕೇ ಭಯಪಡುವ ಸ್ಥಿತಿ ನಿರ್ಮಾಣವಾಗಿದೆ. ಜನರು ಅಭದ್ರತೆ ಎದುರಿಸುತ್ತಿದ್ದಾರೆ. ಭಯೋತ್ಪಾದಕರು ಮಾತ್ರ ‘ ಸರ್ಕಾರ ನಮ್ಮನ್ನು ಮುಟ್ಟುವುದಿಲ್ಲ’ ಎಂದು ನಿರ್ಭೀತಿಯಿಂದಿದ್ದಾರೆ’ ಎಂದು ಆರೋಪಿಸಿದರು.