ಮಂಗಳೂರು: ದೈನಂದಿನ ಚಟುವಟಿಕೆಗಳಿಗಾಗಿ ದಕ್ಷಿಣ ಕನ್ನಡ ಜಿಲ್ಲೆಗೆ ಬರಲು ಕಾಸರಗೋಡು ಕನ್ನಡಿಗರಿಗೆ ತುರ್ತು ಪಾಸ್ ನೀಡುವುದಕ್ಕಾಗಿ ದಕ್ಷಿಣ ಕನ್ನಡ ಹಾಗೂ ಕಾಸರಗೋಡು ಜಿಲ್ಲೆಯ ಗಡಿ ತಲಪಾಡಿಯಲ್ಲಿ 3 ಸಹಾಯ ಕೇಂದ್ರಗಳನ್ನು (ಹೆಲ್ಪ್ ಡೆಸ್ಕ್) ಸ್ಥಾಪಿಸಿ, ಅಲ್ಲಿಯೇ ಪಾಸ್ ವಿತರಿಸಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಆದೇಶಿಸಿದ್ದಾರೆ.