ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೋಮವಾರ ನಡೆದ ಮುಜರಾಯಿ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ವಿಷಯ ಪ್ರಸ್ತಾಪಿಸಿದ ಹೆಚ್ಚುವರಿ ಜಿಲ್ಲಾಧಿಕಾರಿ ಎಂ.ಜೆ.ರೂಪಾ, ‘ಕುಕ್ಕೆ ಸುಬ್ರಹ್ಮಣ್ಯ ಕರ್ನಾಟಕದ ಶ್ರೀಮಂತ ದೇವಸ್ಥಾನಗಳಲ್ಲಿ ಒಂದು. ಮಲೆ ಮಹದೇಶ್ವರ ಪ್ರಾಧಿಕಾರದ ಮಾದರಿಯಲ್ಲಿ ಇಲ್ಲಿಗೂ ಒಂದು ಪ್ರಾಧಿಕಾರ ರಚಿಸಿದರೆ ಹೆಚ್ಚು ಅನುಕೂಲ ಆಗುತ್ತದೆ. ಮುಖ್ಯಮಂತ್ರಿಯವರೇ ಪ್ರಾಧಿಕಾರದ ಅಧ್ಯಕ್ಷರಾಗಿರುವುದರಿಂದ ಅಭಿವೃದ್ಧಿಗೆ ಹೆಚ್ಚು ಅನುದಾನ ದೊರೆಯುತ್ತದೆ. ದೇವಸ್ಥಾನದ ಆದಾಯವನ್ನೂ ವ್ಯವಸ್ಥಿತವಾಗಿ ಬಳಸಲು ಸಾಧ್ಯವಾಗುತ್ತದೆ’ ಎಂದರು.