ಮಂಗಳೂರು: ಕೊಲ್ಲಮೊಗರು - ಕಲ್ಮಕಾರು ಸೇರಿದಂತೆ ಸುಳ್ಯ ತಾಲ್ಲೂಕಿನಲ್ಲಿ ನೆಟ್ ವರ್ಕ್ ಹಾಗೂ ಸಂಪರ್ಕದ ಸಮಸ್ಯೆಗಳ ಬಗ್ಗೆ ವಾರದಲ್ಲಿ ಜಿಲ್ಲಾಧಿಕಾರಿ ಹಾಗೂ ಸ್ಥಳೀಯ ಶಾಸಕರ ಸಮಕ್ಷಮದಲ್ಲಿ ಸಭೆ ಕರೆದು ಸಮಸ್ಯೆ ಬಗೆಹರಿಸಲು ಪ್ರಯತ್ನಿಸಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು.
'ಪ್ರಜಾವಾಣಿ' ಜೊತೆ ಮಾತನಾಡಿದ ಅವರು, ಈ ಭಾಗದಲ್ಲಿ ನೆಟ್ ವರ್ಕ್ ಸಮಸ್ಯೆಯಿಂದ ಪಡಿತರ ಸೇರಿದಂತೆ ಸರ್ಕಾರದ ಆಡಳಿತಾತ್ಮಕ ಹಾಗೂ ಜನಜೀವನಕ್ಕೆ ತೊಂದರೆ ಆಗುತ್ತಿದೆ. ಈ ನಿಟ್ಟಿನಲ್ಲಿ ಸಭೆ ನಡೆಸುತ್ತೇನೆ. ಸಮಗ್ರ ಸುಳ್ಯ ತಾಲ್ಲೂಕಿನಲ್ಲಿನ ಸಂಪರ್ಕ ಸಮಸ್ಯೆಗಳಿಗೆ ಪ್ರಾಮಾಣಿಕವಾಗಿ ಸ್ಪಂದಿಸುತ್ತೇವೆ ಎಂದರು.