ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜನಾರ್ದನ ಪೂಜಾರಿ– ಸಚಿವ ಕೋಟ ಶ್ರೀನಿವಾಸ ಪೂಜಾರಿ ಭೇಟಿ: ಭಾವನಾತ್ಮಕ ವಿಡಿಯೊ ವೈರಲ್

Last Updated 12 ಅಕ್ಟೋಬರ್ 2021, 12:37 IST
ಅಕ್ಷರ ಗಾತ್ರ

ಮಂಗಳೂರು:ಕುದ್ರೋಳಿ ಗೋಕರ್ಣನಾಥ ಕ್ಷೇತ್ರಕ್ಕೆ ಭಾನುವಾರ ‘ಮಂಗಳೂರು ದಸರಾ’ ಉದ್ಘಾಟನೆಗಾಗಿ ಬಂದಿದ್ದ ಕೇಂದ್ರದ ಮಾಜಿ ಸಚಿವ ಹಾಗೂ ಕ್ಷೇತ್ರದ ನವೀಕರಣದ ರೂವಾರಿ ಬಿ. ಜನಾರ್ದನ ಪೂಜಾರಿ ಅವರನ್ನು ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಭೇಟಿಯಾದರು.

ಈ ಸಂದರ್ಭ ಸಚಿವರು ಮೊಣಕಾಲೂರಿ ಜನಾರ್ದನ ಪೂಜಾರಿ ಅವರಿಗೆ ನಮಸ್ಕರಿಸಿ, ಆತ್ಮೀಯವಾಗಿ ಮಾತುಕತೆ ನಡೆಸಿದ ಭಾವನಾತ್ಮಕ ಸನ್ನಿವೇಶದ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

ಜೊತೆಯಲ್ಲಿದ್ದ ಸಚಿವಕೋಟ ಪುತ್ರಿ ಸಹ ಜನಾರ್ದನ ಪೂಜಾರಿಗೆ ಕಾಲಿಗೆ ನಮಸ್ಕರಿಸಿ ಗೌರವ ತೋರಿದ್ದಾರೆ.

ಈ ಸಂದರ್ಭ ಜನಾರ್ದನ ಪೂಜಾರಿಯವರು ಕೋಟ ಅವರಿ ಮತ್ತು ಅವರ ಮಗಳಿಗೆ ಶಾಲು ಹೊದಿಸಿ ಸನ್ಮಾನ ಮಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT