11 ಗಂಟೆಗೆ ದೋಣಿ ಗಳಲ್ಲಿ ಕೋಟಿ ಕಂಠ ಗಾಯನದ ಮೊದಲ ಹಾಡು ಆರಂಭವಾಯಿತು. ಆರು ಕನ್ನಡದ ಹಾಡುಗಳು ಸೊಗಸಾಗಿ ಮೂಡಿ ಬಂದವು. ಬಳಿಕ ತುಳು ಭಾಷೆಯ ಹಾಡುಗಳನ್ನು ಹಾಡಲಾಯಿತು. ಮಂಗಳೂರಿನ ಉಪ ಮೇಯರ್ ಪೂರ್ಣಿಮಾ, ಪಾಲಿಕೆ ಸದಸ್ಯರು, ಮೀನುಗಾರಿಕಾ ಇಲಾಖಾ ಅಧಿಕಾರಿಗಳು, ಆಸಕ್ತರು ಸೇರಿದಂತೆ 500ಕ್ಕೂ ಅಧಿಕ ಮಂದಿ ಭಾಗವಹಿಸಿದ್ದರು. ಕೋಟಿ ಕಂಠ ಗಾಯನಕ್ಕೂ ಮುನ್ನ ಸುಲ್ತಾನ್ ಬತ್ತೇರಿಯ ಕಡಲ ಕಿನಾರೆಯಲ್ಲಿ ಕರಾವಳಿ ಸಂಗೀತ ಕಲಾವಿದರ ಒಕ್ಕೂಟದ ಸದಸ್ಯರಿಂದ ಸಮೂಹಗಾನ, ದೇಶಭಕ್ತಿಗೀತೆ, ನಾಡಗೀತೆಗಳ ಗಾಯನ ನೆರವೇರಿತು.