<p><strong>ಕೊಟ್ಟಿಗೆಹಾರ</strong>: ಸಾಮಾಜಿಕ ಸುಧಾರಣೆಯ ಹರಿಕಾರರಾಗಿದ್ದ ಬ್ರಹ್ಮಶ್ರಿ ನಾರಾಯಣಗುರುಗಳ ಚಿಂತನೆ ಸಮಾಜ ಸುಧಾರಣೆಗೆ ಪೂರಕವಾಗಿದ್ದು, ಅವುಗಳನ್ನು ಅಳವಡಿಸಿಕೊಳ್ಳಬೇಕು ಎಂದು ಉಪನ್ಯಾಸಕ ನವೀನ್ ಆನೆದಿಬ್ಬ ಹೇಳಿದರು.</p>.<p>ಬಣಕಲ್ ಸಮೀಪದ ಹಿರೇಬೈಲ್ನ ಬ್ರಹ್ಮಶ್ರೀ ನಾರಾಯಣಗುರು ಮಲೆಯಾಳಿ ಸಂಘದಿಂದ ಬಣಕಲ್ನಲ್ಲಿ ಹಮ್ಮಿಕೊಂಡಿದ್ದ ನಾರಾಯಣಗುರು ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ನಾರಾಯಣಗುರುಗಳ ಕ್ರಾಂತಿಕಾರಿ ನಡೆ ಎಲ್ಲ ಸಮುದಾಯಕ್ಕೂ ಪ್ರಸ್ತುತವಾಗಿದೆ. ಹಲವು ಧರ್ಮಗಳು ಒಟ್ಟಾಗಿ ಜೀವಿಸುವ ಹಾಗೂ ದೇಶದ ಅಖಂಡತೆಯನ್ನು ಪ್ರತಿಪಾದಿಸುವ ಚಿಂತನೆ ಅವರ ತತ್ವದಲ್ಲಿ ಅಡಗಿದೆ ಎಂದರು.</p>.<p>ಬ್ರಹ್ಮಶ್ರೀ ನಾರಾಯಣಗುರು ಮಲೆಯಾಳಿ ಸಂಘದ ಅಧ್ಯಕ್ಷ ರಾಮಚಂದ್ರ ಮಾತನಾಡಿ, ನಾರಾಯಣಗುರುಗಳ ಜಯಂತಿಯ ಜತೆಗೆ ಜಗತ್ತನ್ನು ಒಂದೇ ಜಾತಿ ಒಂದೇ ಮತ ಒಂದೇ ಧರ್ಮದಲ್ಲಿ ಕಂಡ ಅವರ ವ್ಯಕ್ತಿತ್ವವನ್ನು ನೆನಪಿಸುವುದು ಹಾಗೂ ಅವರ ತತ್ವ ಆದರ್ಶಗಳನ್ನು ಪಾಲನೆ ಮಾಡುವುದು ನಮ್ಮ ಜವಾಬ್ದಾರಿಯಾಗಿದೆ ಎಂದರು.</p>.<p>ಹೂವಿನ ರಂಗೋಲಿ ಬಿಡಿಸುವ ಸ್ಪರ್ಧೆ ಏರ್ಪಡಿಸಲಾಗಿತ್ತು. ವಿಜೇತರಿಗೆ ಬಹುಮಾನ ವಿತರಿಸಲಾಯಿತು.</p>.<p>ಸಮುದಾಯದ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಬ್ರಹ್ಮಶ್ರೀ ನಾರಾಯಣಗುರು ಮಲಯಾಳಿ ಸಂಘದ ಪದಾಧಿಕಾರಿಗಳು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಟ್ಟಿಗೆಹಾರ</strong>: ಸಾಮಾಜಿಕ ಸುಧಾರಣೆಯ ಹರಿಕಾರರಾಗಿದ್ದ ಬ್ರಹ್ಮಶ್ರಿ ನಾರಾಯಣಗುರುಗಳ ಚಿಂತನೆ ಸಮಾಜ ಸುಧಾರಣೆಗೆ ಪೂರಕವಾಗಿದ್ದು, ಅವುಗಳನ್ನು ಅಳವಡಿಸಿಕೊಳ್ಳಬೇಕು ಎಂದು ಉಪನ್ಯಾಸಕ ನವೀನ್ ಆನೆದಿಬ್ಬ ಹೇಳಿದರು.</p>.<p>ಬಣಕಲ್ ಸಮೀಪದ ಹಿರೇಬೈಲ್ನ ಬ್ರಹ್ಮಶ್ರೀ ನಾರಾಯಣಗುರು ಮಲೆಯಾಳಿ ಸಂಘದಿಂದ ಬಣಕಲ್ನಲ್ಲಿ ಹಮ್ಮಿಕೊಂಡಿದ್ದ ನಾರಾಯಣಗುರು ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ನಾರಾಯಣಗುರುಗಳ ಕ್ರಾಂತಿಕಾರಿ ನಡೆ ಎಲ್ಲ ಸಮುದಾಯಕ್ಕೂ ಪ್ರಸ್ತುತವಾಗಿದೆ. ಹಲವು ಧರ್ಮಗಳು ಒಟ್ಟಾಗಿ ಜೀವಿಸುವ ಹಾಗೂ ದೇಶದ ಅಖಂಡತೆಯನ್ನು ಪ್ರತಿಪಾದಿಸುವ ಚಿಂತನೆ ಅವರ ತತ್ವದಲ್ಲಿ ಅಡಗಿದೆ ಎಂದರು.</p>.<p>ಬ್ರಹ್ಮಶ್ರೀ ನಾರಾಯಣಗುರು ಮಲೆಯಾಳಿ ಸಂಘದ ಅಧ್ಯಕ್ಷ ರಾಮಚಂದ್ರ ಮಾತನಾಡಿ, ನಾರಾಯಣಗುರುಗಳ ಜಯಂತಿಯ ಜತೆಗೆ ಜಗತ್ತನ್ನು ಒಂದೇ ಜಾತಿ ಒಂದೇ ಮತ ಒಂದೇ ಧರ್ಮದಲ್ಲಿ ಕಂಡ ಅವರ ವ್ಯಕ್ತಿತ್ವವನ್ನು ನೆನಪಿಸುವುದು ಹಾಗೂ ಅವರ ತತ್ವ ಆದರ್ಶಗಳನ್ನು ಪಾಲನೆ ಮಾಡುವುದು ನಮ್ಮ ಜವಾಬ್ದಾರಿಯಾಗಿದೆ ಎಂದರು.</p>.<p>ಹೂವಿನ ರಂಗೋಲಿ ಬಿಡಿಸುವ ಸ್ಪರ್ಧೆ ಏರ್ಪಡಿಸಲಾಗಿತ್ತು. ವಿಜೇತರಿಗೆ ಬಹುಮಾನ ವಿತರಿಸಲಾಯಿತು.</p>.<p>ಸಮುದಾಯದ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಬ್ರಹ್ಮಶ್ರೀ ನಾರಾಯಣಗುರು ಮಲಯಾಳಿ ಸಂಘದ ಪದಾಧಿಕಾರಿಗಳು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>