ಕೊರೊನಾ ವಾರಿಯರ್ಸ್ಗಳನ್ನು ಸಲೀಂ ಅಹ್ಮದ್ ಗೌರವಿಸಿದರು. ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಹರೀಶ್ ಕುಮಾರ್,ವಿಧಾನಸಭಾ ಮುಖ್ಯ ಸಚೇತಕ ನಾರಾಯಣ ಸ್ವಾಮಿ, ಕೆಪಿಸಿಸಿ ಸಂಯೋಜಕ ಟಿ.ಪಿ.ರಮೇಶ್, ಕೆಪಿಸಿಸಿ ಕಾರ್ಯದರ್ಶಿ ಪಿ.ಯು. ಮೋಹನ್, ಕೆಪಿಸಿಸಿ ಸದಸ್ಯರಾದ ಎಂ.ಎಸ್. ಮಹಮ್ಮದ್, ಎಂ.ಬಿ.ವಿಶ್ವನಾಥ ರೈ, ಮಾಜಿ ಶಾಸಕಿ ಶಕುಂತಳಾ ಶೆಟ್ಟಿ, ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮುರಳೀಧರ ರೈ, ಪಕ್ಷದ ಮುಖಂಡರಾದ ಟಿ.ಎಂ. ಶಹೀದ್, ವೆಂಕಪ್ಪ ಗೌಡ, ಭರತ್ ಮುಂಡೋಡಿ, ನಝೀರ್ ಮಠ, ಯುವ ಕಾಂಗ್ರೆಸ್ ತಾಲ್ಲೂಕು ಘಟಕದ ಅಧ್ಯಕ್ಷ ಯು.ಟಿ. ತೌಸೀಫ್ ಇದ್ದರು.