ಆದರೆ, ಚುನಾವಣೆಗೆ ಮುನ್ನ ಈ ಜಮೀನಿಗೆ ₹1.4 ಕೋಟಿ ಪಾವತಿಸಲು ಕೆಪಿಟಿಸಿಎಲ್ಗೆ ಕಂದಾಯ ಇಲಾಖೆ ಸೂಚಿಸಿತ್ತು. ಆದರೆ, ಪಾವತಿಸಲು ವಿಳಂಬವಾಗಿತ್ತು. ಈ ಬಗ್ಗೆ ಶಾಸಕ ಅಶೋಕ್ ಕುಮಾರ್ ರೈ ಅವರ ಗಮನ ಸೆಳೆದಾಗ ಇಂಧನ ಸಚಿವರನ್ನು ಭೇಟಿ ಮಾಡಿ 15 ದಿನಗಳಲ್ಲಿ ನಿಗದಿತ ಮೊತ್ತ ಪಾವತಿಸಲು ಕ್ರಮ ಕೈಗೊಂಡು ಜಿಲ್ಲಾಧಿಕಾರಿಗೆ ಸೂಚನೆ ನೀಡಲಾಗಿದೆ. ಕೆಪಿಟಿಸಿಎಲ್ನಿಂದ ವತಿಯಿಂದ ಡಿಪಿಆರ್ ಹಾಗೂ ಟೆಂಡರ್ ಪ್ರಕ್ರಿಯೆ ನಡೆಯಬೇಕಿದೆ.