<p><strong>ಮಂಗಳೂರು</strong>: ಈ ಬಾರಿಯ ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ದಕ್ಷಿಣ ಕನ್ನಡ ಜಿಲ್ಲೆ ರಾಜ್ಯದಲ್ಲಿ ಎರಡನೇ ಸ್ಥಾನಕ್ಕೆ ಜಿಗಿದಿದೆ. </p><p>ಜಿಲ್ಲೆಯ ಒಟ್ಟು ಫಲಿತಾಂಶ ಶೇ 92.12ರಷ್ಟಾಗಿದೆ. ಪರೀಕ್ಷೆಗೆ ಹಾಜರಾಗಿದ್ದ ಒಟ್ಟು 29,701 ವಿದ್ಯಾರ್ಥಿಗಳಲ್ಲಿ 27,360 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.</p><p>ಕಳೆದ ವರ್ಷ ಜಿಲ್ಲೆಯ ಒಟ್ಟು ಫಲಿತಾಂಶ ಶೇ 89.47 ಆಗಿದ್ದು, ರಾಜ್ಯದಲ್ಲಿ 17ನೇ ಸ್ಥಾನದಲ್ಲಿತ್ತು. 2022ರಲ್ಲಿ ದಕ್ಷಿಣ ಕನ್ನಡ ಜಿಲ್ಲೆ 20ನೇ ಸ್ಥಾನದಲ್ಲಿತ್ತು.</p><p>ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ರಾಜ್ಯದಲ್ಲಿ ಅಗ್ರ ಸ್ಥಾನ ಕಾಯ್ದುಕೊಳ್ಳುವ ಜಿಲ್ಲೆಯಲ್ಲಿ, ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ಪ್ರತಿ ಬಾರಿ ಕುಸಿತವಾಗುತ್ತಿದೆ ಎಂಬ ಸಾರ್ವತ್ರಿಕ ಆರೋಪ ಇತ್ತು. ಈ ಬಾರಿ ಈ ಆರೋಪದಿಂದ ಜಿಲ್ಲೆ ಮುಕ್ತವಾಗಿದೆ.</p><p>'ಮುಖ್ಯ ಶಿಕ್ಷಕರು, ಸಹ ಶಿಕ್ಷಕರ ನಿರಂತರ ಪ್ರಯತ್ನ, ಕಲಿಕೆಯಲ್ಲಿ ಹಿಂದುಳಿದ ಮಕ್ಕಳನ್ನು ಗುರುತಿಸಿ ಆರಂಭದಲ್ಲೇ ತರಬೇತಿ ನೀಡಿರುವುದು, ವಿಷಯ ಪರಿಣಿತ ಶಿಕ್ಷಕರು ಗರಿಷ್ಠ ಅಂಕ ಗಳಿಕೆಗೆ ಸಲಹೆ, ಮಾರ್ಗದರ್ಶನ ಮಾಡಿರುವುದು ಪರೀಕ್ಷಾ ಫಲಿತಾಂಶದಲ್ಲಿ ಪ್ರತಿಫಲನಗೊಂಡಿದೆ. ಈ ಬಾರಿ ಪರೀಕ್ಷೆಯಲ್ಲಿ ವೆಬ್ ಕಾಸ್ಟಿಂಗ್ ಪ್ರಯೋಗ ಮಾಡಲಾಗಿತ್ತು. ಮಕ್ಕಳು ಯಾವುದೇ ಆತಂಕ ಇಲ್ಲದೆ ಪರೀಕ್ಷೆ ಬರೆದಿದ್ದರು' ಎಂದು ಡಿಡಿಪಿಐ ವೆಂಕಟೇಶ ಪಟಗಾರ್ 'ಪ್ರಜಾವಾಣಿ'ಗೆ ಪ್ರತಿಕ್ರಿಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು</strong>: ಈ ಬಾರಿಯ ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ದಕ್ಷಿಣ ಕನ್ನಡ ಜಿಲ್ಲೆ ರಾಜ್ಯದಲ್ಲಿ ಎರಡನೇ ಸ್ಥಾನಕ್ಕೆ ಜಿಗಿದಿದೆ. </p><p>ಜಿಲ್ಲೆಯ ಒಟ್ಟು ಫಲಿತಾಂಶ ಶೇ 92.12ರಷ್ಟಾಗಿದೆ. ಪರೀಕ್ಷೆಗೆ ಹಾಜರಾಗಿದ್ದ ಒಟ್ಟು 29,701 ವಿದ್ಯಾರ್ಥಿಗಳಲ್ಲಿ 27,360 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.</p><p>ಕಳೆದ ವರ್ಷ ಜಿಲ್ಲೆಯ ಒಟ್ಟು ಫಲಿತಾಂಶ ಶೇ 89.47 ಆಗಿದ್ದು, ರಾಜ್ಯದಲ್ಲಿ 17ನೇ ಸ್ಥಾನದಲ್ಲಿತ್ತು. 2022ರಲ್ಲಿ ದಕ್ಷಿಣ ಕನ್ನಡ ಜಿಲ್ಲೆ 20ನೇ ಸ್ಥಾನದಲ್ಲಿತ್ತು.</p><p>ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ರಾಜ್ಯದಲ್ಲಿ ಅಗ್ರ ಸ್ಥಾನ ಕಾಯ್ದುಕೊಳ್ಳುವ ಜಿಲ್ಲೆಯಲ್ಲಿ, ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ಪ್ರತಿ ಬಾರಿ ಕುಸಿತವಾಗುತ್ತಿದೆ ಎಂಬ ಸಾರ್ವತ್ರಿಕ ಆರೋಪ ಇತ್ತು. ಈ ಬಾರಿ ಈ ಆರೋಪದಿಂದ ಜಿಲ್ಲೆ ಮುಕ್ತವಾಗಿದೆ.</p><p>'ಮುಖ್ಯ ಶಿಕ್ಷಕರು, ಸಹ ಶಿಕ್ಷಕರ ನಿರಂತರ ಪ್ರಯತ್ನ, ಕಲಿಕೆಯಲ್ಲಿ ಹಿಂದುಳಿದ ಮಕ್ಕಳನ್ನು ಗುರುತಿಸಿ ಆರಂಭದಲ್ಲೇ ತರಬೇತಿ ನೀಡಿರುವುದು, ವಿಷಯ ಪರಿಣಿತ ಶಿಕ್ಷಕರು ಗರಿಷ್ಠ ಅಂಕ ಗಳಿಕೆಗೆ ಸಲಹೆ, ಮಾರ್ಗದರ್ಶನ ಮಾಡಿರುವುದು ಪರೀಕ್ಷಾ ಫಲಿತಾಂಶದಲ್ಲಿ ಪ್ರತಿಫಲನಗೊಂಡಿದೆ. ಈ ಬಾರಿ ಪರೀಕ್ಷೆಯಲ್ಲಿ ವೆಬ್ ಕಾಸ್ಟಿಂಗ್ ಪ್ರಯೋಗ ಮಾಡಲಾಗಿತ್ತು. ಮಕ್ಕಳು ಯಾವುದೇ ಆತಂಕ ಇಲ್ಲದೆ ಪರೀಕ್ಷೆ ಬರೆದಿದ್ದರು' ಎಂದು ಡಿಡಿಪಿಐ ವೆಂಕಟೇಶ ಪಟಗಾರ್ 'ಪ್ರಜಾವಾಣಿ'ಗೆ ಪ್ರತಿಕ್ರಿಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>