ಮಾರ್ಚ್ನಿಂದ ಅಂತರ ರಾಜ್ಯ ಬಸ್ ಸಂಚಾರ ಸ್ಥಗಿತಗೊಳಿಸಲಾಗಿತ್ತು. ಜೊತೆಗೆ ಗಡಿ ರಸ್ತೆಗಳನ್ನು ಸಂಪೂರ್ಣವಾಗಿ ಬಂದ್ ಮಾಡಲಾಗಿತ್ತು. ಈಗಾಗಲೇ ಉಭಯ ಜಿಲ್ಲಾಡಳಿತಗಳ ಆದೇಶದ ಬಳಿಕ ಕೆಲವು ಪ್ರಮುಖ ಗಡಿಗಳನ್ನು ತೆರವುಗೊಳಿಸಿ ಅಂತರ ರಾಜ್ಯ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ. ಇದೀಗ ಮಂಗಳೂರು-ಕಾಸರಗೋಡು ಜಿಲ್ಲೆಗಳ ನಡುವೆ ಕೆಎಸ್ಆರ್ಟಿಸಿ. ಬಸ್ ಸಂಚಾರಕ್ಕೆ ಒಪ್ಪಿಗೆ ನೀಡಲಾಗಿದೆ.