ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಸರಗೋಡು–ಮಂಗಳೂರು ನಡುವೆ ಇದೇ 21ರಿಂದ ಬಸ್‌ ಸಂಚಾರ ಆರಂಭ

Last Updated 12 ಸೆಪ್ಟೆಂಬರ್ 2020, 1:06 IST
ಅಕ್ಷರ ಗಾತ್ರ

ಮಂಗಳೂರು: ಕಾಸರಗೋಡು-ಮಂಗಳೂರು ನಡುವೆ ಇದೇ 21ರಿಂದ ಕೆಎಸ್‌ಆರ್‌ಟಿಸಿ ಬಸ್ ಸಂಚಾರ ಆರಂಭಗೊಳ್ಳಲಿದೆ. ಈ ಬಗ್ಗೆ ಇದೀಗ ಆದೇಶ ಹೊರಡಿಸಲಾಗಿದೆ.

ಮಾರ್ಚ್‌ನಿಂದ ಅಂತರ ರಾಜ್ಯ ಬಸ್ ಸಂಚಾರ ಸ್ಥಗಿತಗೊಳಿಸಲಾಗಿತ್ತು. ಜೊತೆಗೆ ಗಡಿ ರಸ್ತೆಗಳನ್ನು ಸಂಪೂರ್ಣವಾಗಿ ಬಂದ್ ಮಾಡಲಾಗಿತ್ತು. ಈಗಾಗಲೇ ಉಭಯ ಜಿಲ್ಲಾಡಳಿತಗಳ ಆದೇಶದ ಬಳಿಕ ಕೆಲವು ಪ್ರಮುಖ ಗಡಿಗಳನ್ನು ತೆರವುಗೊಳಿಸಿ ಅಂತರ ರಾಜ್ಯ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ. ಇದೀಗ ಮಂಗಳೂರು-ಕಾಸರಗೋಡು ಜಿಲ್ಲೆಗಳ ನಡುವೆ ಕೆಎಸ್ಆರ್‌ಟಿಸಿ. ಬಸ್ ಸಂಚಾರಕ್ಕೆ ಒಪ್ಪಿಗೆ ನೀಡಲಾಗಿದೆ.

ಆನ್ ಲೈನ್ ಮೂಲಕ ಟಿಕೆಟ್ ಬುಕ್ಕಿಂಗ್‌ಗೆ ವ್ಯವಸ್ಥೆ ಕಲ್ಪಿಸಲಾಗಿದೆ. ಪ್ರಯಾಣಿಕರ ಬೇಡಿಕೆಗೆ ಅನುಗುಣವಾಗಿ ಬಸ್ ಸಂಚಾರ ನಡೆಸಲಿವೆ. ಒಂದು ಬಸ್‌ನಲ್ಲಿ 40 ಮಂದಿ ಇದ್ದಲ್ಲಿ ಮಾತ್ರವೇ ಸಂಚಾರ ನಡೆಸಲಿದೆ. ಮೊದಲ ಹಂತದಲ್ಲಿ ಕಾಸರಗೋಡು-ಮಂಗಳೂರು ಹಾಗೂ ಕಾಸರಗೋಡು-ಪಂಜಿಕ್ಕಲ್ ರಸ್ತೆಗಳಲ್ಲಿ ಮಾತ್ರ ಬಸ್ ಸಂಚಾರ ಆರಂಭಿಸಲಾಗುವುದು ಎಂದು ತಿಳಿದು ಬಂದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT