<p><strong>ಮಂಗಳೂರು</strong>: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ನೇತೃತ್ವದಲ್ಲಿ ವಿವಿಧ ಬಿಲ್ಲವ ಸಂಘಟನೆಗಳ ಸಹಯೋಗದಲ್ಲಿ 'ಕುದ್ರೋಳಿ ತೀರ್ಥಾಟನೆ' ನಮ್ಮ ನಡಿಗೆ ಶ್ರೀ ಗುರುವಿನೆಡೆಗೆ ಪಾದಯಾತ್ರೆಯು ಫೆ. 21ರಂದು ಮಂಗಳೂರಿನಲ್ಲಿ ನಡೆಯಲಿದೆ ಎಂದು ಕುದ್ರೋಳಿ ಕ್ಷೇತ್ರದ ಆಡಳಿತ ಮಂಡಳಿ ಕೋಶಾಧಿಕಾರಿ ಪದ್ಮರಾಜ್ ಆರ್. ಪೂಜಾರಿ ಹೇಳಿದರು. </p><p>ಶುಕ್ರವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಅಸ್ಪ್ರಶ್ಯತೆಯ ಕಾರಣಕ್ಕೆ ಹಿಂದುಳಿದ ವರ್ಗಗಳಿಗೆ ದೇವಾಲಯಗಳಿಗೆ ಪ್ರವೇಶ ಇರಲಿಲ್ಲ. ಆ ಕಾಲದಲ್ಲಿ ಸಮಾನತೆಯ ಹರಿಕಾರರಾದ</p><p> ಬ್ರಹ್ಮಶ್ರೀ ನಾರಾಯಣ ಗುರುಗಳು ಕುದ್ರೋಳಿ ಕ್ಷೇತ್ರದಲ್ಲಿ ಶಿವಲಿಂಗ ಪ್ರತಿಷ್ಠಾಪನೆ ಮಾಡಿದರು. 1912 ಫೆಬ್ರುವರಿ 21, ಶಿವಲಿಂಗ ಪ್ರತಿಷ್ಠಾಪನೆ ಮಾಡಿದ ದಿನ ಮಾತ್ರವಲ್ಲ, ಶೋಷಿತ ಸಮುದಾಯಗಳಿಗೆ ಸಾಮಾಜಿಕ ನ್ಯಾಯದ ಹೊಸ ದಿಕ್ಕನ್ನು ತೋರಿದ ಕ್ಷಣವಾಗಿತ್ತು. ಈ ದಿನದ ನೆನಪಿನಲ್ಲಿ ಫೆ. 21ರಂದು ನಗರದ ರೈಲ್ವೆ ನಿಲ್ದಾಣದಿಂದ ಕುದ್ರೋಳಿ ಕ್ಷೇತ್ರದವರೆಗೆ 'ಓಂ ಶ್ರೀ ನಾರಾಯಣ ಪರಮ ಗುರುವೇ ನಮಃ' ಮಂತ್ರೋಚ್ಛಾರಣೆಯೊಂದಿಗೆ ಪಾದಯಾತ್ರೆ ನಡೆಸಲಾಗುವುದು ಎಂದರು. </p><p>ಶ್ರೀ ಗುರುಗಳ ಜ್ಞಾನದ ಸಂಕೇತವಾದ ಹಳದಿ ವಸ್ತ್ರಧಾರಣೆಯೊಂದಿಗೆ 10 ಸಾವಿರಕ್ಕೂ ಹೆಚ್ಚು ಭಕ್ತರು ಪಾದಯಾತ್ರೆಯಲ್ಲಿ ಭಾಗಿಯಾಗಲಿದ್ದಾರೆ. ಕುದ್ರೋಳಿ ತೀರ್ಥಾಟನೆ ಕಾರ್ಯಕ್ರಮ ವನ್ನು ಈ ವರ್ಷ ಪ್ರಾರಂಭಿಸಲಾಗುತ್ತಿದ್ದು, ಇನ್ನು ಮುಂದೆ ಪ್ರತಿ ವರ್ಷ ಈ ಕಾರ್ಯಕ್ರಮ ಅದ್ಧೂರಿಯಾಗಿ ನಡೆಯಲಿದೆ ಎಂದು ತಿಳಿಸಿದರು. </p><p>ಆಡಳಿತ ಮಂಡಳಿಯ ಅಧ್ಯಕ್ಷ ಜಯರಾಜ ಸೋಮಸುಂದರಂ, ಪದಾಧಿಕಾರಿಗಳು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು</strong>: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ನೇತೃತ್ವದಲ್ಲಿ ವಿವಿಧ ಬಿಲ್ಲವ ಸಂಘಟನೆಗಳ ಸಹಯೋಗದಲ್ಲಿ 'ಕುದ್ರೋಳಿ ತೀರ್ಥಾಟನೆ' ನಮ್ಮ ನಡಿಗೆ ಶ್ರೀ ಗುರುವಿನೆಡೆಗೆ ಪಾದಯಾತ್ರೆಯು ಫೆ. 21ರಂದು ಮಂಗಳೂರಿನಲ್ಲಿ ನಡೆಯಲಿದೆ ಎಂದು ಕುದ್ರೋಳಿ ಕ್ಷೇತ್ರದ ಆಡಳಿತ ಮಂಡಳಿ ಕೋಶಾಧಿಕಾರಿ ಪದ್ಮರಾಜ್ ಆರ್. ಪೂಜಾರಿ ಹೇಳಿದರು. </p><p>ಶುಕ್ರವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಅಸ್ಪ್ರಶ್ಯತೆಯ ಕಾರಣಕ್ಕೆ ಹಿಂದುಳಿದ ವರ್ಗಗಳಿಗೆ ದೇವಾಲಯಗಳಿಗೆ ಪ್ರವೇಶ ಇರಲಿಲ್ಲ. ಆ ಕಾಲದಲ್ಲಿ ಸಮಾನತೆಯ ಹರಿಕಾರರಾದ</p><p> ಬ್ರಹ್ಮಶ್ರೀ ನಾರಾಯಣ ಗುರುಗಳು ಕುದ್ರೋಳಿ ಕ್ಷೇತ್ರದಲ್ಲಿ ಶಿವಲಿಂಗ ಪ್ರತಿಷ್ಠಾಪನೆ ಮಾಡಿದರು. 1912 ಫೆಬ್ರುವರಿ 21, ಶಿವಲಿಂಗ ಪ್ರತಿಷ್ಠಾಪನೆ ಮಾಡಿದ ದಿನ ಮಾತ್ರವಲ್ಲ, ಶೋಷಿತ ಸಮುದಾಯಗಳಿಗೆ ಸಾಮಾಜಿಕ ನ್ಯಾಯದ ಹೊಸ ದಿಕ್ಕನ್ನು ತೋರಿದ ಕ್ಷಣವಾಗಿತ್ತು. ಈ ದಿನದ ನೆನಪಿನಲ್ಲಿ ಫೆ. 21ರಂದು ನಗರದ ರೈಲ್ವೆ ನಿಲ್ದಾಣದಿಂದ ಕುದ್ರೋಳಿ ಕ್ಷೇತ್ರದವರೆಗೆ 'ಓಂ ಶ್ರೀ ನಾರಾಯಣ ಪರಮ ಗುರುವೇ ನಮಃ' ಮಂತ್ರೋಚ್ಛಾರಣೆಯೊಂದಿಗೆ ಪಾದಯಾತ್ರೆ ನಡೆಸಲಾಗುವುದು ಎಂದರು. </p><p>ಶ್ರೀ ಗುರುಗಳ ಜ್ಞಾನದ ಸಂಕೇತವಾದ ಹಳದಿ ವಸ್ತ್ರಧಾರಣೆಯೊಂದಿಗೆ 10 ಸಾವಿರಕ್ಕೂ ಹೆಚ್ಚು ಭಕ್ತರು ಪಾದಯಾತ್ರೆಯಲ್ಲಿ ಭಾಗಿಯಾಗಲಿದ್ದಾರೆ. ಕುದ್ರೋಳಿ ತೀರ್ಥಾಟನೆ ಕಾರ್ಯಕ್ರಮ ವನ್ನು ಈ ವರ್ಷ ಪ್ರಾರಂಭಿಸಲಾಗುತ್ತಿದ್ದು, ಇನ್ನು ಮುಂದೆ ಪ್ರತಿ ವರ್ಷ ಈ ಕಾರ್ಯಕ್ರಮ ಅದ್ಧೂರಿಯಾಗಿ ನಡೆಯಲಿದೆ ಎಂದು ತಿಳಿಸಿದರು. </p><p>ಆಡಳಿತ ಮಂಡಳಿಯ ಅಧ್ಯಕ್ಷ ಜಯರಾಜ ಸೋಮಸುಂದರಂ, ಪದಾಧಿಕಾರಿಗಳು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>