ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ನಿವೃತ್ತನಾದ ಮಾವುತನ ಗೌರವಿಸಿದ ಆನೆ

Published 1 ಜನವರಿ 2024, 23:31 IST
Last Updated 1 ಜನವರಿ 2024, 23:31 IST
ಅಕ್ಷರ ಗಾತ್ರ

ಸುಬ್ರಹ್ಮಣ್ಯ (ದಕ್ಷಿಣ ಕನ್ನಡ): ಮಹತೋಭಾರ ಕುಕ್ಕೆ ಶ್ರೀಸುಬ್ರಹ್ಮಣ್ಯ ದೇವಸ್ಥಾನದ ಆನೆ ‘ಯಶಸ್ವಿ’ಯ ಮಾವುತರಾಗಿದ್ದ ಶ್ರೀನಿವಾಸ ಗೌಡ ಧರ್ಮಸ್ಥಳ ಭಾನುವಾರ ನಿವೃತ್ತರಾದರು.

ಯಶಸ್ವಿಯು ಶ್ರೀನಿವಾಸ ಅವರಿಗೆ ಹಾರ ಹಾಕಿ ಸೊಂಡಿಲನ್ನು ಅವರ ತಲೆಯ ಮೇಲಿರಿಸಿ ಗೌರವ ಸಲ್ಲಿಸಿತು.

ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಆನೆ ಮಾವುತರಾಗಿ ಸುಮಾರು 15ವರ್ಷ ಅವರು ಸೇವೆ ಸಲ್ಲಿಸಿದ್ದರು. ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನರಾಂ ಸುಳ್ಳಿ ಶ್ರೀನಿವಾಸ ಅವರನ್ನು ಸನ್ಮಾನಿಸಿದರು. ದೇವಳದ ಕಾರ್ಯನಿರ್ವಹಣಾಧಿಕಾರಿ ನಿಂಗಯ್ಯ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT