<p><strong>ಸುಬ್ರಹ್ಮಣ್ಯ: </strong>ಸರ್ಕಾರದ ಆದೇಶ ಪಾಲನೆಯ ಕಾರಣಕ್ಕೆ ಕುಕ್ಕೆ ಸುಬ್ರಹ್ಮಣ್ಯ ದೇವಾಲಯದಲ್ಲಿ ಬುಧವಾರ ಸರ್ಪ ಸಂಸ್ಕಾರ ಸೇವೆಯನ್ನು ಬಂದ್ ಮಾಡಲಾಗಿದೆ.</p>.<p>ಈ ಮಾಹಿತಿ ಅರಿಯದೆ ದೂರದ ಊರುಗಳಿಂದ ಪ್ರಸಿದ್ಧ ನಾಗಕ್ಷೇತ್ರವಾಗಿರುವ ಕುಕ್ಕೆಗೆ ಬಂದಿರುವ ಭಕ್ತರು, ಆಡಳಿತ ಮಂಡಳಿಯನ್ನು ತರಾಟೆಗೆ ತೆಗೆದುಕೊಂಡರು.</p>.<p>'ಸರ್ಪ ಸಂಸ್ಕಾರ ನಡೆಸಲು ಕುಕ್ಕೆ ಸುಬ್ರಹ್ಮಣ್ಯ ಕ್ಕೆ ಬಂದಿದ್ದೆವು. 2-3 ತಿಂಗಳುಗಳ ಹಿಂದೆ ಸರ್ಪ ಸಂಸ್ಕಾರ ಸೇವೆಯನ್ನು ಬುಕ್ ಮಾಡಲಾಗಿತ್ತು. ನಮಗೆ ನೀಡಿದ್ದ ದಿನಾಂಕಕ್ಕೆ ಅನುಗುಣವಾಗಿ ಬುಧವಾರ ದೇವಾಲಯಕ್ಕೆ ಬಂದಿದ್ದೇವೆ. ದೂರದ ಊರುಗಳಿಂದ ಪ್ರಯಾಣ ಮಾಡಿ ಬಂದಿರುವ ನಮಗೆ, ಈಗ ಸೇವೆ ಲಭ್ಯ ಇಲ್ಲ ಎಂಬ ಮಾಹಿತಿಯನ್ನು ನೀಡುತ್ತಿದ್ದಾರೆ' ಎಂದು ಭಕ್ತರು ದೂರಿದರು.</p>.<p>'ಸರ್ಕಾರದ ಆದೇಶ ಪಾಲಿಸುವುದು ಅನಿವಾರ್ಯ. ಸರ್ಪ ಸಂಸ್ಕಾರ ಸೇವೆ ಎರಡು ದಿನ ನಡೆಯುತ್ತದೆ. ಗುರುವಾರಕ್ಕೆ ಸೇವೆಗೆ ಅವಕಾಶ ಇಲ್ಲದ ಕಾರಣ ಈ ಸೇವೆಯನ್ನು ಬುಧವಾರ ಬಂದ್ ಮಾಡಲಾಗಿದೆ' ಎಂದು ದೇವಾಲಯದ ಆಡಳಿತ ಮಂಡಳಿ ಪ್ರಮುಖರು ಸ್ಪಷ್ಟಪಡಿಸಿದರು.</p>.<p>ದೇವಾಲಯದಲ್ಲಿ ಇನ್ನುಳಿದ ಸೇವೆಗಳು ನಡೆಯುತ್ತಿವೆ. ಸರ್ಪ ಸಂಸ್ಕಾರ ಸೇವೆ ಸಲ್ಲಿಸಲು ಬೇರೆ ಬೇರೆ ಊರುಗಳಿಂದ ನೂರಾರು ಜನರು ಬಂದಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸುಬ್ರಹ್ಮಣ್ಯ: </strong>ಸರ್ಕಾರದ ಆದೇಶ ಪಾಲನೆಯ ಕಾರಣಕ್ಕೆ ಕುಕ್ಕೆ ಸುಬ್ರಹ್ಮಣ್ಯ ದೇವಾಲಯದಲ್ಲಿ ಬುಧವಾರ ಸರ್ಪ ಸಂಸ್ಕಾರ ಸೇವೆಯನ್ನು ಬಂದ್ ಮಾಡಲಾಗಿದೆ.</p>.<p>ಈ ಮಾಹಿತಿ ಅರಿಯದೆ ದೂರದ ಊರುಗಳಿಂದ ಪ್ರಸಿದ್ಧ ನಾಗಕ್ಷೇತ್ರವಾಗಿರುವ ಕುಕ್ಕೆಗೆ ಬಂದಿರುವ ಭಕ್ತರು, ಆಡಳಿತ ಮಂಡಳಿಯನ್ನು ತರಾಟೆಗೆ ತೆಗೆದುಕೊಂಡರು.</p>.<p>'ಸರ್ಪ ಸಂಸ್ಕಾರ ನಡೆಸಲು ಕುಕ್ಕೆ ಸುಬ್ರಹ್ಮಣ್ಯ ಕ್ಕೆ ಬಂದಿದ್ದೆವು. 2-3 ತಿಂಗಳುಗಳ ಹಿಂದೆ ಸರ್ಪ ಸಂಸ್ಕಾರ ಸೇವೆಯನ್ನು ಬುಕ್ ಮಾಡಲಾಗಿತ್ತು. ನಮಗೆ ನೀಡಿದ್ದ ದಿನಾಂಕಕ್ಕೆ ಅನುಗುಣವಾಗಿ ಬುಧವಾರ ದೇವಾಲಯಕ್ಕೆ ಬಂದಿದ್ದೇವೆ. ದೂರದ ಊರುಗಳಿಂದ ಪ್ರಯಾಣ ಮಾಡಿ ಬಂದಿರುವ ನಮಗೆ, ಈಗ ಸೇವೆ ಲಭ್ಯ ಇಲ್ಲ ಎಂಬ ಮಾಹಿತಿಯನ್ನು ನೀಡುತ್ತಿದ್ದಾರೆ' ಎಂದು ಭಕ್ತರು ದೂರಿದರು.</p>.<p>'ಸರ್ಕಾರದ ಆದೇಶ ಪಾಲಿಸುವುದು ಅನಿವಾರ್ಯ. ಸರ್ಪ ಸಂಸ್ಕಾರ ಸೇವೆ ಎರಡು ದಿನ ನಡೆಯುತ್ತದೆ. ಗುರುವಾರಕ್ಕೆ ಸೇವೆಗೆ ಅವಕಾಶ ಇಲ್ಲದ ಕಾರಣ ಈ ಸೇವೆಯನ್ನು ಬುಧವಾರ ಬಂದ್ ಮಾಡಲಾಗಿದೆ' ಎಂದು ದೇವಾಲಯದ ಆಡಳಿತ ಮಂಡಳಿ ಪ್ರಮುಖರು ಸ್ಪಷ್ಟಪಡಿಸಿದರು.</p>.<p>ದೇವಾಲಯದಲ್ಲಿ ಇನ್ನುಳಿದ ಸೇವೆಗಳು ನಡೆಯುತ್ತಿವೆ. ಸರ್ಪ ಸಂಸ್ಕಾರ ಸೇವೆ ಸಲ್ಲಿಸಲು ಬೇರೆ ಬೇರೆ ಊರುಗಳಿಂದ ನೂರಾರು ಜನರು ಬಂದಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>