ಕ್ಷೇತ್ರದ ಅರ್ಚಕರಾದ ಮಧುಸೂದನ್ ಕಲ್ಲುರಾಯ ಧಾರ್ಮಿಕ ವಿಧಿ ವಿಧಾನಗಳನ್ನು ನೆರವೇರಿಸಿದರು. ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ನಿಕಟಪೂರ್ವ ಅಧ್ಯಕ್ಷ ಮೋಹನ್ರಾಂ ಸುಳ್ಳಿ, ಸದಸ್ಯರಾದ ಶ್ರೀವತ್ಸಾ ಬೆಂಗಳೂರು, ಶೋಭಾ ಗಿರಿಧರ್, ಮನೋಹರ ರೈ, ವನಜಾ ವಿ.ಭಟ್, ದೇವಳದ ಕಾರ್ಯನಿರ್ವಹಣಾಧಿಕಾರಿ ನಿಂಗಯ್ಯ, ರಾಜ್ಯ ಧಾರ್ಮಿಕ ಪರಿಷತ್ ಸದಸ್ಯೆ ಮಲ್ಲಿಕಾ ಪಕ್ಕಳ, ಸುಬ್ರಹ್ಮಣ್ಯ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸುಜಾತ ಕಲ್ಲಾಜೆ, ಪ್ರಮುಖರಾದ ಕೃಷ್ಣಮೂರ್ತಿ ಭಟ್, ವಿಮಲ ರಂಗಯ್ಯ, ಹರೀಶ್ ಇಂಜಾಡಿ, ಲೋಲಾಕ್ಷ, ಪವನ್, ಅಚ್ಯುತ ಗೌಡ ಬಳ್ಪ, ಶಿವರಾಮ ರೈ, ದೇವಳದ ಪದ್ಮನಾಭ ಶೆಟ್ಟಿಗಾರ್, ಎಂಜಿನಿಯರ್ ಉದಯಕುಮಾರ್ ಭಾಗವಹಿಸಿದ್ದರು.