<p><strong>ಸುಬ್ರಹ್ಮಣ್ಯ:</strong> ಕುಕ್ಕೆ ಸುಬ್ರಹ್ಮಣ್ಯದಲ್ಲಿ ವಾರ್ಷಿಕ ಚಂಪಾಷಷ್ಠಿ ಜಾತ್ರೆ ಪ್ರಯುಕ್ತ ದೇವರಗದ್ದೆಯ ಹೊಸಳಿಗಮ್ಮ ದೈವದ ಗುಡಿಯಿಂದ ಲಕ್ಷದೀಪೋತ್ಸವದ ದಿನವಾದ ಶನಿವಾರ ದೈವದ ಭಂಡಾರವು ದೇವಳಕ್ಕೆ ಆಗಮಿಸಿತು.</p>.<p>ದೇವರಗದ್ದೆಯ ಹೊಸಳಿಗಮ್ಮ ದೈವದ ಗುಡಿಯಲ್ಲಿ ಪೂಜೆ ನೆರವೇರಿತು. ಪುರೋಹಿತ ನಾರಾಯಣ ಭಟ್ ವಿದಿವಿಧಾನಗಳನ್ನು ನೆರವೇರಿಸಿದರು.</p>.<p>ಬಳಿಕ ಸಂಪ್ರದಾಯದ ಪ್ರಕಾರ ದೈವದ ಭಂಡಾರವನ್ನು ಮಂಗಳವಾದ್ಯಗಳೊಂದಿಗೆ ದೇವಳಕ್ಕೆ ತರಲಾಯಿತು. ದೇವಳದ ಹೊಸಳಿಗಮ್ಮ ಗುಡಿಯಲ್ಲಿ ಭಂಡಾರವನ್ನು ಇರಿಸಿದ ಬಳಿಕ ಪುರೋಹಿತರು ಪೂಜೆ ನೆರವೇರಿಸಿ, ಪ್ರಸಾದ ನೀಡಿದರು. ಶ್ರೀದೇವರ ಉತ್ಸವಾದಿಗಳ ಕೊನೆಯ ದಿನ ದೇವರಗದ್ದೆಗೆ ಮತ್ತೆ ಭಂಡಾರವನ್ನು ತೆಗೆದುಕೊಂಡು ಹೋಗಲಾಗುವುದು.</p>.<p>ದೇವಳದ ಕಾರ್ಯನಿರ್ವಹಣಧಿಕಾರಿ ಅರವಿಂದ ಅಯ್ಯಪ್ಪ ಸುತಗುಂಡಿ, ಸಹಾಯಕ ಕಾರ್ಯನಿರ್ವಹಣಾಧಿಕಾರಿ ಯೇಸುರಾಜ್, ಕಚೇರಿ ಅಧೀಕ್ಷಕ ಪದ್ಮನಾಭ ಶೆಟ್ಟಿಗಾರ್, ದೇವಳದ ಹೆಬ್ಬಾರ್ ಪ್ರಸನ್ನ ಭಟ್, ಪಾಟಾಳಿ ಎ.ಆರ್.ಲೋಕೇಶ್, ದೇವಳದ ಎನ್.ಸಿ.ಲಕ್ಷ್ಮಣ, ಎಂ.ಆರ್.ಲೋಕೇಶ್, ಶಿವಕುಮಾರ್ ಎ.ವಿ., ದಯಾನಂದ ಹೊಸೋಳಿಕೆ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸುಬ್ರಹ್ಮಣ್ಯ:</strong> ಕುಕ್ಕೆ ಸುಬ್ರಹ್ಮಣ್ಯದಲ್ಲಿ ವಾರ್ಷಿಕ ಚಂಪಾಷಷ್ಠಿ ಜಾತ್ರೆ ಪ್ರಯುಕ್ತ ದೇವರಗದ್ದೆಯ ಹೊಸಳಿಗಮ್ಮ ದೈವದ ಗುಡಿಯಿಂದ ಲಕ್ಷದೀಪೋತ್ಸವದ ದಿನವಾದ ಶನಿವಾರ ದೈವದ ಭಂಡಾರವು ದೇವಳಕ್ಕೆ ಆಗಮಿಸಿತು.</p>.<p>ದೇವರಗದ್ದೆಯ ಹೊಸಳಿಗಮ್ಮ ದೈವದ ಗುಡಿಯಲ್ಲಿ ಪೂಜೆ ನೆರವೇರಿತು. ಪುರೋಹಿತ ನಾರಾಯಣ ಭಟ್ ವಿದಿವಿಧಾನಗಳನ್ನು ನೆರವೇರಿಸಿದರು.</p>.<p>ಬಳಿಕ ಸಂಪ್ರದಾಯದ ಪ್ರಕಾರ ದೈವದ ಭಂಡಾರವನ್ನು ಮಂಗಳವಾದ್ಯಗಳೊಂದಿಗೆ ದೇವಳಕ್ಕೆ ತರಲಾಯಿತು. ದೇವಳದ ಹೊಸಳಿಗಮ್ಮ ಗುಡಿಯಲ್ಲಿ ಭಂಡಾರವನ್ನು ಇರಿಸಿದ ಬಳಿಕ ಪುರೋಹಿತರು ಪೂಜೆ ನೆರವೇರಿಸಿ, ಪ್ರಸಾದ ನೀಡಿದರು. ಶ್ರೀದೇವರ ಉತ್ಸವಾದಿಗಳ ಕೊನೆಯ ದಿನ ದೇವರಗದ್ದೆಗೆ ಮತ್ತೆ ಭಂಡಾರವನ್ನು ತೆಗೆದುಕೊಂಡು ಹೋಗಲಾಗುವುದು.</p>.<p>ದೇವಳದ ಕಾರ್ಯನಿರ್ವಹಣಧಿಕಾರಿ ಅರವಿಂದ ಅಯ್ಯಪ್ಪ ಸುತಗುಂಡಿ, ಸಹಾಯಕ ಕಾರ್ಯನಿರ್ವಹಣಾಧಿಕಾರಿ ಯೇಸುರಾಜ್, ಕಚೇರಿ ಅಧೀಕ್ಷಕ ಪದ್ಮನಾಭ ಶೆಟ್ಟಿಗಾರ್, ದೇವಳದ ಹೆಬ್ಬಾರ್ ಪ್ರಸನ್ನ ಭಟ್, ಪಾಟಾಳಿ ಎ.ಆರ್.ಲೋಕೇಶ್, ದೇವಳದ ಎನ್.ಸಿ.ಲಕ್ಷ್ಮಣ, ಎಂ.ಆರ್.ಲೋಕೇಶ್, ಶಿವಕುಮಾರ್ ಎ.ವಿ., ದಯಾನಂದ ಹೊಸೋಳಿಕೆ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>