<p><strong>ಸುಬ್ರಹ್ಮಣ್ಯ</strong>: ‘ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಭಕ್ತರಿಗೆ ಬೆಳಿಗ್ಗಿನ ಉಪಾಹಾರ ಪ್ರಸಾದ ಕೊಡುವ ಯೋಜನೆ ಇದೇ 30ಕ್ಕೆ ಆರಂಭವಾಗಲಿದೆ’ ಎಂದು ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರೀಶ್ ಇಂಜಾಡಿ ತಿಳಿಸಿದರು.</p>.<p>ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಮುಜರಾಯಿ ಸಚಿವರ ಸಲಹೆಯಂತೆ ಅಧಿಕಾರಿಗಳು ನಡೆಸಿದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಷಣ್ಮುಖ ಭೋಜನ ಶಾಲೆಯಲ್ಲಿ ಬೆಳಿಗ್ಗೆ 8 ಗಂಟೆಯಿಂದ 10ರವರೆಗೆ ಉಪಾಹಾರ ಸಿಗಲಿದೆ ಎಂದರು.</p>.<p>ಏಕಕಾಲದಲ್ಲಿ 3 ಸಾವಿರ ಮಂದಿ ಕುಳಿತು ಭೋಜನ ಸ್ವೀಕರಿಸುವ ಭೋಜನಶಾಲೆಯ ಕಟ್ಟಡ ನಿರ್ಮಾಣದ ಮಾಸ್ಟರ್ ಪ್ಲಾನ್ ಮತ್ತು ನಕಾಶೆ ಸಿದ್ಧಪಡಿಸಲಾಗಿದೆ. 2-3 ವರ್ಷಗಳಲ್ಲಿ ಕಟ್ಟಡ ಸಿದ್ಧವಾಗಲಿದೆ. ಸುತ್ತುಪೌಳಿ, ಆಶ್ಲೇಷ ಬಲಿ ಸೇವೆಯ ಹೊಸ ಕಟ್ಟಡದ ಕೆಲಸವೂ ಶೀಘ್ರ ಆರಂಭ ಆಗಲಿದೆ ಎಂದು ಅವರು ತಿಳಿಸಿದರು.</p>.<p>ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಅರವಿಂದ ಅಯ್ಯಪ್ಪ ಸುತಗುಂಡಿ, ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಅಶೋಕ್ ನೆಕ್ರಾಜೆ, ಲೀಲಾ ಮನಮೋಹನ್, ಸೌಮ್ಯಾ ಬಿ.ಕೆ, ಪ್ರವೀಣ್ ಪಿ, ಅಜಿತ್ ಕುಮಾರ್ ಹಾಗೂ ಮಾಸ್ಟರ್ ಪ್ಲಾನ್ ಸಮಿತಿ ಸದಸ್ಯರಾದ ಪವನ್ ಎಂ.ಡಿ, ಅಚ್ಯುತ ಗೌಡ ಆಲ್ಕಬೆ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸುಬ್ರಹ್ಮಣ್ಯ</strong>: ‘ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಭಕ್ತರಿಗೆ ಬೆಳಿಗ್ಗಿನ ಉಪಾಹಾರ ಪ್ರಸಾದ ಕೊಡುವ ಯೋಜನೆ ಇದೇ 30ಕ್ಕೆ ಆರಂಭವಾಗಲಿದೆ’ ಎಂದು ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರೀಶ್ ಇಂಜಾಡಿ ತಿಳಿಸಿದರು.</p>.<p>ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಮುಜರಾಯಿ ಸಚಿವರ ಸಲಹೆಯಂತೆ ಅಧಿಕಾರಿಗಳು ನಡೆಸಿದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಷಣ್ಮುಖ ಭೋಜನ ಶಾಲೆಯಲ್ಲಿ ಬೆಳಿಗ್ಗೆ 8 ಗಂಟೆಯಿಂದ 10ರವರೆಗೆ ಉಪಾಹಾರ ಸಿಗಲಿದೆ ಎಂದರು.</p>.<p>ಏಕಕಾಲದಲ್ಲಿ 3 ಸಾವಿರ ಮಂದಿ ಕುಳಿತು ಭೋಜನ ಸ್ವೀಕರಿಸುವ ಭೋಜನಶಾಲೆಯ ಕಟ್ಟಡ ನಿರ್ಮಾಣದ ಮಾಸ್ಟರ್ ಪ್ಲಾನ್ ಮತ್ತು ನಕಾಶೆ ಸಿದ್ಧಪಡಿಸಲಾಗಿದೆ. 2-3 ವರ್ಷಗಳಲ್ಲಿ ಕಟ್ಟಡ ಸಿದ್ಧವಾಗಲಿದೆ. ಸುತ್ತುಪೌಳಿ, ಆಶ್ಲೇಷ ಬಲಿ ಸೇವೆಯ ಹೊಸ ಕಟ್ಟಡದ ಕೆಲಸವೂ ಶೀಘ್ರ ಆರಂಭ ಆಗಲಿದೆ ಎಂದು ಅವರು ತಿಳಿಸಿದರು.</p>.<p>ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಅರವಿಂದ ಅಯ್ಯಪ್ಪ ಸುತಗುಂಡಿ, ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಅಶೋಕ್ ನೆಕ್ರಾಜೆ, ಲೀಲಾ ಮನಮೋಹನ್, ಸೌಮ್ಯಾ ಬಿ.ಕೆ, ಪ್ರವೀಣ್ ಪಿ, ಅಜಿತ್ ಕುಮಾರ್ ಹಾಗೂ ಮಾಸ್ಟರ್ ಪ್ಲಾನ್ ಸಮಿತಿ ಸದಸ್ಯರಾದ ಪವನ್ ಎಂ.ಡಿ, ಅಚ್ಯುತ ಗೌಡ ಆಲ್ಕಬೆ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>