<p><strong>ಸುಬ್ರಹ್ಮಣ್ಯ:</strong> ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಬಾಗಲಕೋಟೆಯ ಉದ್ಯಮಿ ನಾಗರಾಜ ಕುಲಕರ್ಣಿ ಕುಟುಂಬಸ್ಥರು ಸೇವಾರೂಪದಲ್ಲಿ ನೀಡಿದ ನೂತನ ಬೆಳ್ಳಿಪಲ್ಲಕಿಯನ್ನು ದೇವರಿಗೆ ಸಮರ್ಪಿಸಲಾಯಿತು.</p>.<p>ದೇವಳದ ಪ್ರಧಾನ ಅರ್ಚಕ ಸೀತಾರಾಮ ಎಡಪಡಿತ್ತಾಯ ಅವರ ಉಪಸ್ಥಿತಿಯಲ್ಲಿ ದೇವಳದ ಅರ್ಚಕ ಸತ್ಯನಾರಾಯಣ ನೂರಿತ್ತಾಯ ಅವರು ವೈದಿಕ ವಿಧಿ– ವಿಧಾನ ನೆರವೇರಿಸಿದರು.</p>.<p>ನಾಗರಾಜ ಕುಲಕರ್ಣಿ, ಭಾರ್ಗವಿ ಕುಲಕರ್ಣಿ, ಭೀಮಾಜಿ, ವೈ.ಎಸ್.ಗಲಗಲಿ ಜಮಖಂಡಿ, ಚಿನ್ಮಯಿ ಕೊಚ್ಚಿ ಮತ್ತು ಕುಟುಂಬಸ್ಥರು ಪಾಲಕಿ ಉತ್ಸವಕ್ಕೆ ಸಂಕಲ್ಪ ನೆರವೇರಿಸಿದರು.</p>.<p>ಕುಕ್ಕೆ ಸುಬ್ರಹ್ಮಣ್ಯ ದೇವರ ದೀಪಾರಾಧನೆಯುಕ್ತ ನೂತನ ಪಲ್ಲಕ್ಕಿಯಲ್ಲಿ ಉತ್ಸವ ನೆರವೇರಿತು. ದೇವರ ಶೇಷವಾಹನಯುಕ್ತ ಬಂಡಿ ರಥೋತ್ಸವ ಹೊರಾಂಗಣದಲ್ಲಿ ನಡೆಯಿತು. ಅರ್ಚಕ ರಾಮಕೃಷ್ಣ ನೂರಿತ್ತಾಯ ಅವರು ಉತ್ಸವದ ವಿಧಿವಿಧಾನ ನೆರವೇರಿಸಿದರು.</p>.<p>ಸುಮಾರು ₹ 17.65 ಲಕ್ಷ ವೆಚ್ಚ, 18 ಕೆ.ಜಿ ಬೆಳ್ಳಿಯಲ್ಲಿ ನಿರ್ಮಿಸಿದ ಪಲ್ಲಕಿಯ ಸಮರ್ಪಣಾ ಸೇವೆ ನೆರವೇರಿಸಿದ ಸೇವಾರ್ಥಿಗಳಿಗೆ ಮಹಾಪ್ರಸಾದ ನೀಡಲಾಯಿತು.</p>.<p>ದೇವಳದ ಇಒ ಅರವಿಂದ ಅಯ್ಯಪ್ಪ ಸುತಗುಂಡಿ, ಶ್ರೀಕುಮಾರ್ ಬಿಲದ್ವಾರ, ಚಿನ್ಮಯಿ ಕೊಚ್ಚಿ, ಶ್ರೀನಿಧಿ, ಯಧುನಂದನ ಗಲಗಲಿ, ಸುಮಂತ್, ರಾಘವ್, ಸುಧನ್ವ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸುಬ್ರಹ್ಮಣ್ಯ:</strong> ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಬಾಗಲಕೋಟೆಯ ಉದ್ಯಮಿ ನಾಗರಾಜ ಕುಲಕರ್ಣಿ ಕುಟುಂಬಸ್ಥರು ಸೇವಾರೂಪದಲ್ಲಿ ನೀಡಿದ ನೂತನ ಬೆಳ್ಳಿಪಲ್ಲಕಿಯನ್ನು ದೇವರಿಗೆ ಸಮರ್ಪಿಸಲಾಯಿತು.</p>.<p>ದೇವಳದ ಪ್ರಧಾನ ಅರ್ಚಕ ಸೀತಾರಾಮ ಎಡಪಡಿತ್ತಾಯ ಅವರ ಉಪಸ್ಥಿತಿಯಲ್ಲಿ ದೇವಳದ ಅರ್ಚಕ ಸತ್ಯನಾರಾಯಣ ನೂರಿತ್ತಾಯ ಅವರು ವೈದಿಕ ವಿಧಿ– ವಿಧಾನ ನೆರವೇರಿಸಿದರು.</p>.<p>ನಾಗರಾಜ ಕುಲಕರ್ಣಿ, ಭಾರ್ಗವಿ ಕುಲಕರ್ಣಿ, ಭೀಮಾಜಿ, ವೈ.ಎಸ್.ಗಲಗಲಿ ಜಮಖಂಡಿ, ಚಿನ್ಮಯಿ ಕೊಚ್ಚಿ ಮತ್ತು ಕುಟುಂಬಸ್ಥರು ಪಾಲಕಿ ಉತ್ಸವಕ್ಕೆ ಸಂಕಲ್ಪ ನೆರವೇರಿಸಿದರು.</p>.<p>ಕುಕ್ಕೆ ಸುಬ್ರಹ್ಮಣ್ಯ ದೇವರ ದೀಪಾರಾಧನೆಯುಕ್ತ ನೂತನ ಪಲ್ಲಕ್ಕಿಯಲ್ಲಿ ಉತ್ಸವ ನೆರವೇರಿತು. ದೇವರ ಶೇಷವಾಹನಯುಕ್ತ ಬಂಡಿ ರಥೋತ್ಸವ ಹೊರಾಂಗಣದಲ್ಲಿ ನಡೆಯಿತು. ಅರ್ಚಕ ರಾಮಕೃಷ್ಣ ನೂರಿತ್ತಾಯ ಅವರು ಉತ್ಸವದ ವಿಧಿವಿಧಾನ ನೆರವೇರಿಸಿದರು.</p>.<p>ಸುಮಾರು ₹ 17.65 ಲಕ್ಷ ವೆಚ್ಚ, 18 ಕೆ.ಜಿ ಬೆಳ್ಳಿಯಲ್ಲಿ ನಿರ್ಮಿಸಿದ ಪಲ್ಲಕಿಯ ಸಮರ್ಪಣಾ ಸೇವೆ ನೆರವೇರಿಸಿದ ಸೇವಾರ್ಥಿಗಳಿಗೆ ಮಹಾಪ್ರಸಾದ ನೀಡಲಾಯಿತು.</p>.<p>ದೇವಳದ ಇಒ ಅರವಿಂದ ಅಯ್ಯಪ್ಪ ಸುತಗುಂಡಿ, ಶ್ರೀಕುಮಾರ್ ಬಿಲದ್ವಾರ, ಚಿನ್ಮಯಿ ಕೊಚ್ಚಿ, ಶ್ರೀನಿಧಿ, ಯಧುನಂದನ ಗಲಗಲಿ, ಸುಮಂತ್, ರಾಘವ್, ಸುಧನ್ವ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>