<p><strong>ಸುಬ್ರಹ್ಮಣ್ಯ:</strong> ದೇಶದಾದ್ಯಂತ 21 ದಿನಗಳ ಲಾಕ್ಡೌನ್ ಘೋಷಿಸಲಾಗಿದ್ದು, ರಸ್ತೆಗಿಳಿದವರ ಮೇಲೆ ಪೊಲೀಸರು ಲಾಠಿ ಬೀಸುವ ಪ್ರಕರಣಗಳು ದಿನನಿತ್ಯ ನಡೆಯುತ್ತಲೇ ಇವೆ. ಅದರಂತೆ ಕುಕ್ಕೆ ಸುಬ್ರಹ್ಮಣ್ಯದ ಆದಿ ಸುಬ್ರಹ್ಮಣ್ಯದ ಅರ್ಚಕರ ಮೇಲೂ ಪೊಲೀಸರು ಹಲ್ಲೆ ನಡೆಸಿದ್ದಾರೆ.</p>.<p>ಪೂಜೆಗಾಗಿ ಆದಿ ಸುಬ್ರಹ್ಮಣ್ಯಕ್ಕೆ ದೇವಳದ ಕೀ ಸಹಿತ ತೆರಳುತ್ತಿದ್ದ ವೇಳೆ ಸುಬ್ರಹ್ಮಣ್ಯ ಪೋಲೀಸ್ ಠಾಣೆಯ ಶಂಕರ್ ಎನ್ನುವ ಕಾನ್ಸ್ಟೇಬಲ್ ಅವರು ದಾರಿಯಲ್ಲಿ ಅಡ್ಡಗಟ್ಟಿ ಹಲ್ಲೆ ನಡೆಸಿದ್ದಾರೆ.</p>.<p>ಅರ್ಚಕರು ತಾನು ಪೂಜೆಗಾಗಿ ಆದಿ ಸುಬ್ರಹ್ಮಣ್ಯಕ್ಕೆ ತೆರಳುತ್ತ ಇರುವುದಾಗಿ ದೇವಳದ ಕೀಯನ್ನು ತೋರಿಸಿ ಹೇಳಿದರೂ ಬಿಡದ ಪೋಲೀಸ್ ಸಿಬ್ಬಂದಿ ಅರ್ಚಕರನ್ನು ಬೈದದಲ್ಲದೆ, ಕೈಯಲ್ಲಿದ್ದ ಕೋಲಿನಿಂದ ಬಾಸುಂಡೆ ಏಳುವಂತೆ ಹಲ್ಲೆ ನಡೆಸಿದ್ದಾರೆ.</p>.<p>ಜಿಲ್ಲೆಯ ಖ್ಯಾತ ದೇವಳದ ಮುಖ್ಯ ಅರ್ಚಕರು ತನ್ನ ದೈನಂದಿನ ಕಾರ್ಯ ನಡೆಸಲು ತೆರಳುವಾಗಲೂ ಈ ರೀತಿ ಅಮಾನುಷವಾಗಿ ಹಲ್ಲೆಗೈದ ಈ ಪೋಲೀಸ್ ಸಿಬ್ಬಂದಿ ಸ್ಥಳೀಯರೇ ಆಗಿದ್ದು, ಗುರುತು ಇದ್ದರೂ ಈ ರೀತಿ ವರ್ತಿಸಿರುವ ಘಟನೆಯನ್ನು ವಿಪ್ರಸಂಘಟನೆ ಉಗ್ರವಾಗಿ ಖಂಡಿಸುತ್ತದೆ ಮತ್ತು ಹಲ್ಲೆ ನಡೆಸಿದ ಪೋಲೀಸ್ ಸಿಬ್ಬಂದಿಯನ್ನ ತಕ್ಷಣವೇ ಅಮಾನತು ಮಾಡಬೇಕಾಗಿ ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ಮತ್ತು ಜಿಲ್ಲಾಧಿಕಾರಿಯನ್ನು ಆಗ್ರಹಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸುಬ್ರಹ್ಮಣ್ಯ:</strong> ದೇಶದಾದ್ಯಂತ 21 ದಿನಗಳ ಲಾಕ್ಡೌನ್ ಘೋಷಿಸಲಾಗಿದ್ದು, ರಸ್ತೆಗಿಳಿದವರ ಮೇಲೆ ಪೊಲೀಸರು ಲಾಠಿ ಬೀಸುವ ಪ್ರಕರಣಗಳು ದಿನನಿತ್ಯ ನಡೆಯುತ್ತಲೇ ಇವೆ. ಅದರಂತೆ ಕುಕ್ಕೆ ಸುಬ್ರಹ್ಮಣ್ಯದ ಆದಿ ಸುಬ್ರಹ್ಮಣ್ಯದ ಅರ್ಚಕರ ಮೇಲೂ ಪೊಲೀಸರು ಹಲ್ಲೆ ನಡೆಸಿದ್ದಾರೆ.</p>.<p>ಪೂಜೆಗಾಗಿ ಆದಿ ಸುಬ್ರಹ್ಮಣ್ಯಕ್ಕೆ ದೇವಳದ ಕೀ ಸಹಿತ ತೆರಳುತ್ತಿದ್ದ ವೇಳೆ ಸುಬ್ರಹ್ಮಣ್ಯ ಪೋಲೀಸ್ ಠಾಣೆಯ ಶಂಕರ್ ಎನ್ನುವ ಕಾನ್ಸ್ಟೇಬಲ್ ಅವರು ದಾರಿಯಲ್ಲಿ ಅಡ್ಡಗಟ್ಟಿ ಹಲ್ಲೆ ನಡೆಸಿದ್ದಾರೆ.</p>.<p>ಅರ್ಚಕರು ತಾನು ಪೂಜೆಗಾಗಿ ಆದಿ ಸುಬ್ರಹ್ಮಣ್ಯಕ್ಕೆ ತೆರಳುತ್ತ ಇರುವುದಾಗಿ ದೇವಳದ ಕೀಯನ್ನು ತೋರಿಸಿ ಹೇಳಿದರೂ ಬಿಡದ ಪೋಲೀಸ್ ಸಿಬ್ಬಂದಿ ಅರ್ಚಕರನ್ನು ಬೈದದಲ್ಲದೆ, ಕೈಯಲ್ಲಿದ್ದ ಕೋಲಿನಿಂದ ಬಾಸುಂಡೆ ಏಳುವಂತೆ ಹಲ್ಲೆ ನಡೆಸಿದ್ದಾರೆ.</p>.<p>ಜಿಲ್ಲೆಯ ಖ್ಯಾತ ದೇವಳದ ಮುಖ್ಯ ಅರ್ಚಕರು ತನ್ನ ದೈನಂದಿನ ಕಾರ್ಯ ನಡೆಸಲು ತೆರಳುವಾಗಲೂ ಈ ರೀತಿ ಅಮಾನುಷವಾಗಿ ಹಲ್ಲೆಗೈದ ಈ ಪೋಲೀಸ್ ಸಿಬ್ಬಂದಿ ಸ್ಥಳೀಯರೇ ಆಗಿದ್ದು, ಗುರುತು ಇದ್ದರೂ ಈ ರೀತಿ ವರ್ತಿಸಿರುವ ಘಟನೆಯನ್ನು ವಿಪ್ರಸಂಘಟನೆ ಉಗ್ರವಾಗಿ ಖಂಡಿಸುತ್ತದೆ ಮತ್ತು ಹಲ್ಲೆ ನಡೆಸಿದ ಪೋಲೀಸ್ ಸಿಬ್ಬಂದಿಯನ್ನ ತಕ್ಷಣವೇ ಅಮಾನತು ಮಾಡಬೇಕಾಗಿ ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ಮತ್ತು ಜಿಲ್ಲಾಧಿಕಾರಿಯನ್ನು ಆಗ್ರಹಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>