ಜಿಲ್ಲೆಯ ಖ್ಯಾತ ದೇವಳದ ಮುಖ್ಯ ಅರ್ಚಕರು ತನ್ನ ದೈನಂದಿನ ಕಾರ್ಯ ನಡೆಸಲು ತೆರಳುವಾಗಲೂ ಈ ರೀತಿ ಅಮಾನುಷವಾಗಿ ಹಲ್ಲೆಗೈದ ಈ ಪೋಲೀಸ್ ಸಿಬ್ಬಂದಿ ಸ್ಥಳೀಯರೇ ಆಗಿದ್ದು, ಗುರುತು ಇದ್ದರೂ ಈ ರೀತಿ ವರ್ತಿಸಿರುವ ಘಟನೆಯನ್ನು ವಿಪ್ರಸಂಘಟನೆ ಉಗ್ರವಾಗಿ ಖಂಡಿಸುತ್ತದೆ ಮತ್ತು ಹಲ್ಲೆ ನಡೆಸಿದ ಪೋಲೀಸ್ ಸಿಬ್ಬಂದಿಯನ್ನ ತಕ್ಷಣವೇ ಅಮಾನತು ಮಾಡಬೇಕಾಗಿ ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ಮತ್ತು ಜಿಲ್ಲಾಧಿಕಾರಿಯನ್ನು ಆಗ್ರಹಿಸಿದೆ.