<p><strong>ಸುಬ್ರಹ್ಮಣ್ಯ:</strong> ಕುಕ್ಕೆ ಸುಬ್ರಹ್ಮಣ್ಯದಲ್ಲಿ ದೀಪಾವಳಿ ಆಚರಣೆ ನಡೆಯಿತು. ಮಂಗಳವಾರ ರಾತ್ರಿ ದೇವಸ್ಥಾನದಲ್ಲಿ ಗೋಪೂಜೆ, ಗಜಲಕ್ಷ್ಮಿ ಪೂಜೆ ನಡೆಯಿತು. ಇದರೊಂದಿಗೆ ದೇವರ ಹೊರಾಂಗಣ ವರ್ಷಾವಧಿ ಉತ್ಸವಗಳಿಗೆ ಚಾಲನೆ ಸಿಕ್ಕಿದೆ.</p>.<p>ಅರ್ಚಕರು ದೇಗುಲದ ಆನೆ ‘ಯಶಸ್ವಿ’ಗೆ ಆರತಿ ಬೆಳಗಿ, ಪ್ರಸಾದ ನೀಡಿದರು. ದೇಗುಲದಲ್ಲಿ ವಿಶೇಷ ಪ್ರಾರ್ಥನೆ, ಧನಲಕ್ಷ್ಮಿ, ಗೋಪೂಜೆಗಳು ನಡೆದವು.ದೀಪಾವಳಿ ಪ್ರಯುಕ್ತ ದೇವಸ್ಥಾನದಲ್ಲಿ ವಿಶೇಷ ದೀಪಾಲಂಕಾರ ಮಾಡಲಾಗಿತ್ತು.ದೇಗುಲದ ಕಾರ್ಯನಿರ್ವಹಣಾಧಿಕಾರಿಯಾದ ಪುತ್ತೂರು ತಹಶೀಲ್ದಾರ್ ಅನಂತಕೃಷ್ಣ, ಸಹಾಯಕ ಕಾರ್ಯನಿವರ್ವಹಣಾಧಿಕಾರಿ ಚಂದ್ರಶೇಖರ ಪೆರಾಲ್, ದೇಗುಲದ ಅಧೀಕ್ಷಕ ಬಾಲಸುಬ್ರಹ್ಮಣ್ಯ ಭಟ್, ಶಿಷ್ಟಚಾರ ಅಧಿಕಾರಿ ಗೋಪಿನಾಥ ನಂಭೀಶ, ದೇಗುಲದ ಸಿಬ್ಬಂದಿಗಳು, ಮಾವುತರು, ಭಕ್ತರು ಉಪಸ್ಥಿತರಿದ್ದರು.</p>.<p>ದೇವರ ಮೂರ್ತಿ ಹೊರಾಂಗಣ ಪ್ರವೇಶಿಸುವ ಮೂಲಕ ಹೊರಾಂಗಣದ ಉತ್ಸವಗಳು ರಾತ್ರಿ ನಡೆದವು. ಪ್ರಾರ್ಥನೆ ಹಾಗೂ ಮಹಾಪೂಜೆ ,ಪಲ್ಲಕಿ ಮತ್ತು ಬಂಡಿ ಉತ್ಸವಗಳು ಆನೆ, ಬಿರುದಾವಳಿ, ಮಂಗಳವಾದ್ಯಗಳ ನಿನಾದದೊಂದಿಗೆ ಭಕ್ತಿ ಶ್ರದ್ಧೆಯಿಂದ ನಡೆಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸುಬ್ರಹ್ಮಣ್ಯ:</strong> ಕುಕ್ಕೆ ಸುಬ್ರಹ್ಮಣ್ಯದಲ್ಲಿ ದೀಪಾವಳಿ ಆಚರಣೆ ನಡೆಯಿತು. ಮಂಗಳವಾರ ರಾತ್ರಿ ದೇವಸ್ಥಾನದಲ್ಲಿ ಗೋಪೂಜೆ, ಗಜಲಕ್ಷ್ಮಿ ಪೂಜೆ ನಡೆಯಿತು. ಇದರೊಂದಿಗೆ ದೇವರ ಹೊರಾಂಗಣ ವರ್ಷಾವಧಿ ಉತ್ಸವಗಳಿಗೆ ಚಾಲನೆ ಸಿಕ್ಕಿದೆ.</p>.<p>ಅರ್ಚಕರು ದೇಗುಲದ ಆನೆ ‘ಯಶಸ್ವಿ’ಗೆ ಆರತಿ ಬೆಳಗಿ, ಪ್ರಸಾದ ನೀಡಿದರು. ದೇಗುಲದಲ್ಲಿ ವಿಶೇಷ ಪ್ರಾರ್ಥನೆ, ಧನಲಕ್ಷ್ಮಿ, ಗೋಪೂಜೆಗಳು ನಡೆದವು.ದೀಪಾವಳಿ ಪ್ರಯುಕ್ತ ದೇವಸ್ಥಾನದಲ್ಲಿ ವಿಶೇಷ ದೀಪಾಲಂಕಾರ ಮಾಡಲಾಗಿತ್ತು.ದೇಗುಲದ ಕಾರ್ಯನಿರ್ವಹಣಾಧಿಕಾರಿಯಾದ ಪುತ್ತೂರು ತಹಶೀಲ್ದಾರ್ ಅನಂತಕೃಷ್ಣ, ಸಹಾಯಕ ಕಾರ್ಯನಿವರ್ವಹಣಾಧಿಕಾರಿ ಚಂದ್ರಶೇಖರ ಪೆರಾಲ್, ದೇಗುಲದ ಅಧೀಕ್ಷಕ ಬಾಲಸುಬ್ರಹ್ಮಣ್ಯ ಭಟ್, ಶಿಷ್ಟಚಾರ ಅಧಿಕಾರಿ ಗೋಪಿನಾಥ ನಂಭೀಶ, ದೇಗುಲದ ಸಿಬ್ಬಂದಿಗಳು, ಮಾವುತರು, ಭಕ್ತರು ಉಪಸ್ಥಿತರಿದ್ದರು.</p>.<p>ದೇವರ ಮೂರ್ತಿ ಹೊರಾಂಗಣ ಪ್ರವೇಶಿಸುವ ಮೂಲಕ ಹೊರಾಂಗಣದ ಉತ್ಸವಗಳು ರಾತ್ರಿ ನಡೆದವು. ಪ್ರಾರ್ಥನೆ ಹಾಗೂ ಮಹಾಪೂಜೆ ,ಪಲ್ಲಕಿ ಮತ್ತು ಬಂಡಿ ಉತ್ಸವಗಳು ಆನೆ, ಬಿರುದಾವಳಿ, ಮಂಗಳವಾದ್ಯಗಳ ನಿನಾದದೊಂದಿಗೆ ಭಕ್ತಿ ಶ್ರದ್ಧೆಯಿಂದ ನಡೆಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>