<p><strong>ಸುಬ್ರಹ್ಮಣ್ಯ:</strong> ಕುಕ್ಕೆ ಸುಬ್ರಹ್ಮಣ್ಯ ದೇವರ ಚಂಪಾಷಷ್ಠಿ ಜಾತ್ರಾ ಮಹೋತ್ಸವದಲ್ಲಿ ಮೂಲ ನಿವಾಸಿಗಳಾದ ಮಲೆಕುಡಿಯ ಜನಾಂಗದವರು ರಚಿಸುವ ಬೆತ್ತದ ರಥಗಳು ಪ್ರಧಾನವಾಗಿವೆ. ಮಲೆಕುಡಿಯ ಜನಾಂಗದವರು ತಮ್ಮ ಕೈಚಳಕದಿಂದ ತೇರನ್ನು ಸಿದ್ಧಗೊಳಿಸುವ ಕಾಯಕದಲ್ಲಿ ತೊಡಗಿಕೊಂಡಿದ್ದಾರೆ.</p>.<p>ಯಾವುದೇ ಹಗ್ಗ ಬಳಸದೆ ಬೆತ್ತಗಳಿಂದಲೇ ವಿಶಿಷ್ಟವಾದ ರಥವನ್ನು ಅವರು ನಿರ್ಮಿಸುತ್ತಿದ್ದಾರೆ. ಇವುಗಳನ್ನು ಬೆತ್ತದಿಂದಲೇ ಎಳೆಯುವುದು ಮತ್ತೊಂದು ವಿಶೇಷ. ಸಾಲಾಂಕೃತ ರಥಗಳು ಜಾತ್ರೆಯ ಮೆರುಗನ್ನು ಇಮ್ಮಡಿಗೊಳಿಸುತ್ತದೆ. ಇದೀಗ ಮೂಲನಿವಾಸಿ ಮಲೆಕುಡಿಯ ಜನಾಂಗದವರು ಕಾಡಿನಿಂದ ಸಂಗ್ರಹಿಸಿದ ಬೆತ್ತವನ್ನು ಉಪಯೋಗಿಸಿ ರಥಗಳನ್ನು ಸಂಪ್ರದಾಯದಂತೆ ನಿರ್ಮಿಸುತ್ತಿದ್ದಾರೆ.</p>.<p>ರಥದ ಅಟ್ಟೆಯನ್ನು ಬಿದಿರು ಹಾಗೂ ಬ್ರಹ್ಮರಥದದ ಮೆಲ್ಭಾಗವನ್ನು ಬೆತ್ತಗಳಿಂದ ರಚಿಸುತ್ತಾರೆ. ಐದು ಅಂತಸ್ತುಗಳ ಬ್ರಹ್ಮರಥಕ್ಕೆ ಹಲಗೆಯನ್ನಿಟ್ಟು ರಥದ ಕೆಲಸ ಆರಂಭಿಸಿದ್ದಾರೆ. ರಥವನ್ನು ಬಟ್ಟೆಯ ಪತಾಕೆಗಳಿಂದ ಸಿಂಗರಿಸುತ್ತಾರೆ. ಈ ಬಾರಿ ಸುಮಾರು 61 ಮಂದಿ ಹಿರಿಯರು ಮತ್ತು ಕಿರಿಯರು ರಥ ಕಟ್ಟುವ ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸುಬ್ರಹ್ಮಣ್ಯ:</strong> ಕುಕ್ಕೆ ಸುಬ್ರಹ್ಮಣ್ಯ ದೇವರ ಚಂಪಾಷಷ್ಠಿ ಜಾತ್ರಾ ಮಹೋತ್ಸವದಲ್ಲಿ ಮೂಲ ನಿವಾಸಿಗಳಾದ ಮಲೆಕುಡಿಯ ಜನಾಂಗದವರು ರಚಿಸುವ ಬೆತ್ತದ ರಥಗಳು ಪ್ರಧಾನವಾಗಿವೆ. ಮಲೆಕುಡಿಯ ಜನಾಂಗದವರು ತಮ್ಮ ಕೈಚಳಕದಿಂದ ತೇರನ್ನು ಸಿದ್ಧಗೊಳಿಸುವ ಕಾಯಕದಲ್ಲಿ ತೊಡಗಿಕೊಂಡಿದ್ದಾರೆ.</p>.<p>ಯಾವುದೇ ಹಗ್ಗ ಬಳಸದೆ ಬೆತ್ತಗಳಿಂದಲೇ ವಿಶಿಷ್ಟವಾದ ರಥವನ್ನು ಅವರು ನಿರ್ಮಿಸುತ್ತಿದ್ದಾರೆ. ಇವುಗಳನ್ನು ಬೆತ್ತದಿಂದಲೇ ಎಳೆಯುವುದು ಮತ್ತೊಂದು ವಿಶೇಷ. ಸಾಲಾಂಕೃತ ರಥಗಳು ಜಾತ್ರೆಯ ಮೆರುಗನ್ನು ಇಮ್ಮಡಿಗೊಳಿಸುತ್ತದೆ. ಇದೀಗ ಮೂಲನಿವಾಸಿ ಮಲೆಕುಡಿಯ ಜನಾಂಗದವರು ಕಾಡಿನಿಂದ ಸಂಗ್ರಹಿಸಿದ ಬೆತ್ತವನ್ನು ಉಪಯೋಗಿಸಿ ರಥಗಳನ್ನು ಸಂಪ್ರದಾಯದಂತೆ ನಿರ್ಮಿಸುತ್ತಿದ್ದಾರೆ.</p>.<p>ರಥದ ಅಟ್ಟೆಯನ್ನು ಬಿದಿರು ಹಾಗೂ ಬ್ರಹ್ಮರಥದದ ಮೆಲ್ಭಾಗವನ್ನು ಬೆತ್ತಗಳಿಂದ ರಚಿಸುತ್ತಾರೆ. ಐದು ಅಂತಸ್ತುಗಳ ಬ್ರಹ್ಮರಥಕ್ಕೆ ಹಲಗೆಯನ್ನಿಟ್ಟು ರಥದ ಕೆಲಸ ಆರಂಭಿಸಿದ್ದಾರೆ. ರಥವನ್ನು ಬಟ್ಟೆಯ ಪತಾಕೆಗಳಿಂದ ಸಿಂಗರಿಸುತ್ತಾರೆ. ಈ ಬಾರಿ ಸುಮಾರು 61 ಮಂದಿ ಹಿರಿಯರು ಮತ್ತು ಕಿರಿಯರು ರಥ ಕಟ್ಟುವ ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>