ಭಾನುವಾರ, 28 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿ.ಸಿ.ರೋಡು: ಕುಲಾಲ ಸಂಘ ಸಮ್ಮಿಲನ

Published 28 ನವೆಂಬರ್ 2023, 15:32 IST
Last Updated 28 ನವೆಂಬರ್ 2023, 15:32 IST
ಅಕ್ಷರ ಗಾತ್ರ

ಬಂಟ್ವಾಳ: ಇಲ್ಲಿನ ಬಿ.ಸಿ.ರೋಡು ಪೊಸಳ್ಳಿಯಲ್ಲಿ ಕುಲಾಲ ಸುಧಾರಕ ಸಂಘದ ವತಿಯಿಂದ ನಡೆದ ‘ಸಮಾಗಮ ಕುಲಾಲ ಸಂಘ ಸಮ್ಮಿಲನ’ ಕಾರ್ಯಕ್ರಮಕ್ಕೆ ಬಿಎಸ್‌ಎನ್‌ಎಲ್‌ ನಿವೃತ್ತ ಎಜಿಎಂ ಕೃಷ್ಣಶ್ಯಾಮ್ ಚಾಲನೆ ನೀಡಿದರು.

ಸಂಘದ ಅಧ್ಯಕ್ಷ ರಾಧಾಕೃಷ್ಣ ಬಂಟ್ವಾಳ ಅಧ್ಯಕ್ಷತೆ ವಹಿಸಿದ್ದರು.

ಕುಲಾಲ ಕುಂಬಾರ ಯುವ ವೇದಿಕೆ ಜಿಲ್ಲಾ ಘಟಕದ ಅಧ್ಯಕ್ಷ ಸುಕುಮಾರ್ ಬಂಟ್ವಾಳ ಮತ್ತು ಶೈಕ್ಷಣಿಕ ಸಾಧಕಿ ಶಿವಾನಿ ಅವರನ್ನು ಸನ್ಮಾನಿಸಲಾಯಿತು.

ಎಂಜಿನಿಯರ್ ಶಿವಪ್ಪ ಅಲೆತ್ತೂರು, ಜಿಲ್ಲಾ ಮೂಲ್ಯರ ಯಾನೆ ಕುಲಾಲರ ಮಾತೃ ಸಂಘದ ಮಾಜಿ ಅಧ್ಯಕ್ಷ ರಾಜೇಂದ್ರ ಕುಮಾರ್ ಅಳಪೆ, ನಿವೃತ್ತ ಉಪತಹಶೀಲ್ದಾರ್ ಪದ್ಮನಾಭ ಮಯ್ಯರಬೈಲು, ಮಹಿಳಾ ಘಟಕದ ಅಧ್ಯಕ್ಷೆ ಮಾಲತಿ ಮಚ್ಚೇಂದ್ರ, ಸೇವಾದಳಪತಿ ರಾಜೇಶ್ ರಾಯಿ ಇದ್ದರು.

ಸಂಯೋಜಕ ಮಚ್ಚೇಂದ್ರ ಸಾಲ್ಯಾನ್ ಸ್ವಾಗತಿಸಿ, ಸಮಿತಿ ಸದಸ್ಯ ದಾಮೋದರ ಏರ್ಯ ವಂದಿಸಿದರು. ಪತ್ರಕರ್ತ ಸಂದೀಪ್ ಸಾಲ್ಯಾನ್ ಮತ್ತು ಸಂಘದ ಕಾರ್ಯದರ್ಶಿ ಕೇಶವ ಮಾಸ್ಟರ್ ನಿರೂಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT