ಕ್ರಮ ಹಿಂತೆಗೆಯದಿದ್ದರೆ ಆಂದೋಲನ
ಕುಂಬಳೆಯ ಆರಿಕ್ಕಾಡಿಯಲ್ಲಿ ಟೋಲ್ಗೇಟ್ ನಿರ್ಮಾಣ ಅವೈಜ್ಞಾನಿಕವಾಗಿದೆ. ಈ ಕ್ರಮ ವಾಪಸ್ ಪಡೆಯದಿದ್ದರೆ ಸಾರ್ವಜನಿಕರನ್ನು ಒಗ್ಗೂಡಿಸಿ ಆಂದೋಲನ ನಡೆಸುವೆ. ಈಗಾಗಲೇ ಕೇಂದ್ರ ಸಚಿವ ನಿತಿನ್ ಗಡ್ಕರಿ, ಮುಖ್ಯಮಂತ್ರಿ ಪಿಣರಾಯಿ ವಿಜಯನ್, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ, ರಾಜ್ಯ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು, ಸಂಸದ ರಾಜ್ ಮೋಹನ್ ಉಣ್ಣಿತ್ತಾನ್ ಅವರ ಜೊತೆಗೆ ಮಾತುಕತೆ ನಡೆಸಿದ್ದೇನೆ ಎಂದು ಮಂಜೇಶ್ವರ ಶಾಸಕ ಎ.ಕೆ.ಎಂ.ಅಶ್ರಫ್ ತಿಳಿಸಿದ್ದಾರೆ.