ಎರಡು ದಿನಗಳ ಸಮಾವೇಶವನ್ನು ವಿಧಾನಸಭೆ ಸ್ಪೀಕರ್ ಯು.ಟಿ.ಖಾದರ್ ಉದ್ಘಾಟಿಸುವರು. ಅತಿಥಿಗಳಾಗಿ ಶಾಸಕ ಉಮಾನಾಥ್ ಕೋಟ್ಯಾನ್, ಬೆಂಗಳೂರಿನ ಪರಿಶ್ರಮ ನೀಟ್ ಅಕಾಡೆಮಿಯ ಸಂಸ್ಥಾಪಕ, ಚಿಕ್ಕಬಳ್ಳಾಪುರ ಕ್ಷೇತ್ರದ ಶಾಸಕ ಪ್ರದೀಪ್ ಈಶ್ವರ್, ಎಂಎಲ್ಸಿ ಭೋಜೇಗೌಡ, ಮಾಜಿ ಸಚಿವ ಅಭಯಚಂದ್ರ ಜೈನ್, ವಿಧಾನ ಪರಿಷತ್ ಮಾಜಿ ಸದಸ್ಯ ಅರುಣ ಶಹಾಪುರ, ಮಂಗಳೂರು ಕಥೋಲಿಕ್ ಬೋರ್ಡ್ ಆಫ್ ಎಜುಕೇಷನ್ ಕಾರ್ಯದರ್ಶಿ ಫಾದರ್ ಲಿಯೋ ಲಾಸ್ರಾಡೊ, ಕುಪ್ಮಾದ ಗೌರವ ಅಧ್ಯಕ್ಷರಾದ
ಕೆ.ಸಿ.ನಾಯಕ್, ಎಂ.ಬಿ ಪುರಾಣಿಕ್ ಭಾಗವಹಿಸುವರು. ರಾಜ್ಯದ ಅನುದಾನರಹಿತ ಪದವಿ ಪೂರ್ವ ಕಾಲೇಜು ಆಡಳಿತ ಮಂಡಳಿಗಳ ಅಧ್ಯಕ್ಷರು, ಸಂಚಾಲಕರು, ಕಾರ್ಯದರ್ಶಿಗಳು, ಸದಸ್ಯರು ಸಮಾವೇಶದಲ್ಲಿ ಭಾಗವಹಿಸಬೇಕು ಎಂದು ಕುಪ್ಮಾದ ಕಾರ್ಯದರ್ಶಿ ಪ್ರೊ. ನರೇಂದ್ರ ಎಲ್.ನಾಯಕ್ ಪ್ರಕಟಣೆಯಲ್ಲಿ ವಿನಂತಿಸಿದ್ದಾರೆ.