ಮೂಲಸೌಕರ್ಯಕ್ಕೆ ಆದ್ಯತೆ: ‘ನನ್ನ ಕ್ಷೇತ್ರದಲ್ಲಿ ಹೆಚ್ಚಿನ ಸಂಖ್ಯೆಯ ಹೊರರಾಜ್ಯದ ಕಾರ್ಮಿಕರಿದ್ದು, ಅವರನ್ನು ಅವರ ತವರೂರಿಗೆ ಕಳುಹಿಸುವ ಬಗ್ಗೆ ಮುಖ್ಯಮಂತ್ರಿ ಜತೆ ಚರ್ಚಿಸಲಾಗುವುದು. ಅವರಿಗೆ ದೈನಂದಿನ ಊಟೋಪಾಚಾರದ ಬಗ್ಗೆಯೂ ಜಿಲ್ಲಾಧಿಕಾರಿ ಜತೆ ಮಾತನಾಡಿದ್ದು, ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಪಕ್ಷದ ಕಾರ್ಯಕರ್ತರು ಅವರನ್ನು ಗುರುತಿಸಿ ಅವರ ಮೂಲಸೌಕರ್ಯಕ್ಕೆ ಧಕ್ಕೆ ಅಗದಂತೆ ಕ್ರಮ ವಹಿಸಲು ಸೂಚಿಸಿದ್ದೇನೆ’ ಎಂದು ಶಾಸಕ ಡಾ.ವೈ.ಭರತ್ ಶೆಟ್ಟಿ ತಿಳಿಸಿದರು.