‘ದೇರೆಬೈಲ್ನಲ್ಲಿ ನಿರ್ಮಾಣವಾಗುತ್ತಿರುವ ಅಪಾರ್ಟ್ಮೆಂಟ್ನ ಸುಮಾರು 60ಕ್ಕೂ ಹೆಚ್ಚು ಕಾರ್ಮಿಕರು ಶ್ರಮಿಕ್ ರೈಲಿನಲ್ಲಿ ಜಾರ್ಖಂಡ್ಗೆ ತೆರಳಿದ್ದರು. ಇವರು ಮರಳಿ ಬಾರದಿದ್ದರಿಂದ ಕಟ್ಟಡ ನಿರ್ಮಾಣದ ಕೆಲಸ ಮಂದಗತಿಯಲ್ಲಿ ಸಾಗುತ್ತಿತ್ತು. ಆದರೆ, ಫ್ಲ್ಯಾಟ್ ಬುಕ್ ಮಾಡಿದ ಗ್ರಾಹಕರಿಗೆ ಸಕಾಲಕ್ಕೆ ಸಮಯದಲ್ಲಿ ಮನೆ ಒದಗಿಸಬೇಕಾಗಿದೆ. ಹೀಗಾಗಿ, ತ್ವರಿತ ಕೆಲಸಕ್ಕಾಗಿ ಕಾರ್ಮಿಕರನ್ನು ವಿಮಾನದಲ್ಲಿ ಕರೆತಂದಿದ್ದೇವೆ’ ಎಂದು ನಿರ್ಮಾಣ್ ಹೋಮ್ಸ್ ಸಂಸ್ಥೆಯ ಆಡಳಿತ ಪಾಲುದಾರ ಕೃಷ್ಣರಾಜ್ ಸಾಲ್ಯಾನ್ ತಿಳಿಸಿದ್ದಾರೆ.