ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪುತ್ತೂರು | ಯುವತಿಯ ಕೊಲೆ: ಭಗ್ನಪ್ರೇಮಿಯ ಬಂಧನ

Last Updated 19 ಜನವರಿ 2023, 4:35 IST
ಅಕ್ಷರ ಗಾತ್ರ

ಪುತ್ತೂರು: ತಾಲ್ಲೂಕಿನ ಮುಂಡೂರು ಗ್ರಾಮದ ಕಂಪ ಎಂಬಲ್ಲಿ ಮಂಗಳ ವಾರ ಯುವತಿಯೊಬ್ಬರನ್ನು ಚೂರಿ ಯಿಂದ ಇರಿದು ಹತ್ಯೆ ಮಾಡಿದ ಭಗ್ನ ಪ್ರೇಮಿಯನ್ನು ಸಂಪ್ಯ ಪೊಲೀಸರು ಬಂಧಿಸಿದ್ದಾರೆ.

ಮುಂಡೂರು ಗ್ರಾಮದ ಕಂಪ ನಿವಾಸಿ ಜಯಶ್ರೀ (23) ಅವರನ್ನು ಸುಳ್ಯ ತಾಲ್ಲೂಕಿನ ಕನಕಮಜಲು ಗ್ರಾಮದ ಮುಗೇರು ನಿವಾಸಿ ಅಂಗಾರ ಅವರ ಪುತ್ರ ಉಮೇಶ್ (24) ಕೊಲೆ ಮಾಡಿದ್ದ.

ಎಸ್ಪಿ ಋಷಿಕೇಶ್ ಸೋನಾವಣೆ, ಹೆಚ್ಚುವರಿ ಎಸ್ಪಿ ಧರ್ಮಪ್ಪ ಎನ್.ಎಂ, ಪುತ್ತೂರು ಡಿವೈಎಸ್ಪಿ ವೀರಯ್ಯ ಹಿರೇಮಠ್ ಅವರ ಮಾರ್ಗದರ್ಶನದಲ್ಲಿ ತನಿಖೆ ಕೈಗೆತ್ತಿಕೊಂಡಿದ್ದ ಪುತ್ತೂರು ಗ್ರಾಮಾಂತರ ಪೊಲೀಸ್ ಇನ್‌ಸ್ಪೆಕ್ಟರ್ ರವಿ.ಬಿ.ಎಸ್ ಮತ್ತು ಸಂಪ್ಯ ಎಸ್ಐ ಉದಯರವಿ ಎಂ.ವೈ ನೇತೃತ್ವದ ತಂಡ ಆರೋಪಿ ಉಮೇಶನನ್ನು ಬಂಧಿಸಿ, ಕೊಲೆಗೆ ಬಳಸಿದ ಚೂರಿ ಮತ್ತು ಸ್ಥಳಕ್ಕೆ ಬರಲು ಬಳಸಿದ ಆ್ಯಕ್ಟಿವಾ ಸ್ಕೂಟರ್ ವಶಪಡಿಸಿಕೊಂಡಿದ್ದಾರೆ.

ಸಂಪ್ಯ ಠಾಣೆಯ ಎಎಸ್ಐ ಮುರುಗೇಶ್, ಸಿಬ್ಬಂದಿ ಪ್ರವೀಣ್ ರೈ ಪಾಲ್ತಾಡು, ಹರೀಶ್ ಜಿ.ಎನ್, ಅದ್ರಾಮ, ಧರ್ಣಪ್ಪ, ಸಲೀಂ, ಶಿವಾನಂದ, ದೇವರಾಜ್, ಸತೀಶ್, ಹರ್ಷಿತ್, ಗಿರೀಶ್ ರೈ, ಸದ್ದಾಂ, ಹರೀಶ್ ನಾಯ್ಕ್, ನಿತಿನ್‌ ಕುಮಾರ್, ಅಡಿವೆಪ್ಪ ಸಂಗೊಳ್ಳಿ, ಲೋಕೇಶ್, ಗಾಯತ್ರಿ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT