ಮಂಗಳೂರು: ಇಲ್ಲಿನ ಜಿಲ್ಲಾಧಿಕಾರಿ ಕಚೇರಿಯ ಲಿಫ್ಟ್ನಲ್ಲಿ ಮಹಿಳೆಯೊಬ್ಬರು ಸಿಲುಕಿದ ಘಟನೆ ಸೋಮವಾರ ಬೆಳಿಗ್ಗೆ ನಡೆದಿದೆ.
ಜಿಲ್ಲಾಧಿಕಾರಿ ಕಚೇರಿಯ ಸಿಬ್ಬಂದಿ ವಾಣಿ ಲಿಫ್ಟ್ ನಲ್ಲಿ ತೆರಳಿವಾಗ ದಿಢೀರ್ನೇ ಸ್ಥಗಿತಗೊಂಡಿದೆ. ನಂತರ ವಿಷಯ ಅಗ್ನಿಶಾಮಕ ದಳದ ಪಾಂಡೇಶ್ವರ ಠಾಣೆಗೆ ಮುಟ್ಟಿದೆ.
ಕೂಡಲೇ ಸ್ಥಳಕ್ಕೆ ಬಂದ ಅಗ್ನಿಶಾಮಕ ದಳದ ಸಿಬ್ಬಂದಿ, ಸ್ಪ್ರೆಡ್ಡರ್ ಯಂತ್ರ ಬಳಸಿ ಲಿಫ್ಟ್ನ ಬಾಗಿಲನ್ನು ಕತ್ತರಿಸಿದ್ದಾರೆ. 30 ನಿಮಿಷಗಳ ಕಾರ್ಯಾಚರಣೆ ನಂತರ ಲಿಫ್ಟ್ನಲ್ಲಿ ಸಿಲುಕಿದ್ದ ಮಹಿಳೆಯನ್ನು ಯಶಸ್ವಿಯಾಗಿ ರಕ್ಷಿಸಲಾಯಿತು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.