ಮಂಗಳವಾರ ರಾತ್ರಿ ದೇವಸ್ಥಾನದ ಒಳಾಂಗಣದಲ್ಲಿ ಮಂಜುನಾಥ ಸ್ವಾಮಿಯ ಉತ್ಸವ ಮೂರ್ತಿಯನ್ನು ಪಲ್ಲಕ್ಕಿ ಸುತ್ತು, ಚೆಂಡೆಸುತ್ತು, ನಾದಸ್ವರ ಸುತ್ತು, ಸಂಗೀತ ಸುತ್ತು, ಕೊಳಲು ಸುತ್ತು, ಸರ್ವವಾದ್ಯ ಸುತ್ತು ಸಹಿತ 16 ಸುತ್ತುಗಳನ್ನು ಪೂರೈಸಲಾಗುತ್ತದೆ. ಬಳಿಕ ಉತ್ಸವಮೂರ್ತಿಯನ್ನು ಬೆಳ್ಳಿರಥದ ಸ್ವರ್ಣಲೇಪಿತ ಪೀಠದಲ್ಲಿ ಇರಿಸಿ ದೇವಸ್ಥಾನದ ಬಳಿಯಿಂದ ಮುಖ್ಯ ಪ್ರವೇಶದ್ವಾರದ ಬಳಿ ಇರುವ ಗೌರಿಮಾರು ಕಟ್ಟೆಗೆ ಮೆರವಣಿಗೆ ನಡೆಸಿ ರಥೋತ್ಸವ ನಡೆಸಲಾಗುತ್ತದೆ.