ಪ್ರಕರಣಕ್ಕೆ ಸಂಬಂಧಿಸಿ ಈಗಾಗಲೇ ಬಂಧಿಸಿರುವ ಹೂವಿನ ಹಡಗಲಿಯ ರವಿ ಯಾನೆ ವಕೀಲ್ ನಾಯ್ಕ ಎಂಬಾತ ನೀಡಿದ ಮಾಹಿತಿ ಆಧರಿಸಿ, ಮೂರ್ತಿಯನ್ನು ಬಂಧಿಸಲಾಗಿದೆ. ರವಿಯ ಜೊತೆ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದ ಮೂರ್ತಿ ಕೂಡ ಈ ಕೊಲೆ ಕೃತ್ಯದಲ್ಲಿ ಭಾಗಿಯಾಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಮಾಯಾವೇಳ್ ಪೆರಿಯಸಾಮಿ ಬಳಿ ಸಾಕಷ್ಟು ಹಣವಿರಬಹುದು ಎಂದು ಭಾವಿಸಿದ್ದ ಆರೋಪಿ ರವಿ, ಮದ್ಯಸೇವಿಸಿ ಬಂಗ್ರಕುಳೂರಿನ ಮೈದಾನಕ್ಕೆ ಕರೆದೊಯ್ದು ಕೊಲೆಗೈದಿದ್ದ ಎನ್ನಲಾಗಿದ್ದು, ಕೃತ್ಯ ನಡೆದ 45 ದಿನಗಳ ಬಳಿಕ ಮೃತದೇಹ ಪತ್ತೆಯಾಗಿತ್ತು.