<p><strong>ವಿಟ್ಲ:</strong> ಸಮೀಪದ ಒಡಿಯೂರು ಗುರುದೇವದತ್ತ ಸಂಸ್ಥಾನದ ಆವರಣದಲ್ಲಿ ಹೊಸ ಕಟ್ಟಡವೊಂದರ ನಿರ್ಮಾಣಕ್ಕೆ ಪಿಲ್ಲರ್ ಹಾಕಲು ಶನಿವಾರ ಗುಂಡಿ ತೆಗೆದು, ನೆಲ ಸಮತಟ್ಟು ಮಾಡುತ್ತಿದ್ದ ವೇಳೆ ಮೇಲಿನಿಂದ ಮಣ್ಣಿನ ದಿಬ್ಬ ಕುಸಿದು ಮೂವರು ಕಾರ್ಮಿಕರು ಮೃತಪಟ್ಟಿದ್ದಾರೆ.</p>.<p>ಜೆಸಿಬಿ ಯಂತ್ರದಿಂದ ಗುಂಡಿ ತೆಗೆದಿದ್ದು, ಸಂಜೆ 5 ಗಂಟೆ ಸುಮಾರಿಗೆ ನಾಲ್ವರು ಕಾರ್ಮಿಕರು ಗುಂಡಿಯೊಳಕ್ಕೆ ಇಳಿದು ನೆಲ ಸಮತಟ್ಟು ಮಾಡುತ್ತಿದ್ದರು. ಆಗ ಮೇಲಿನಿಂದ ಬೃಹತ್ ಗಾತ್ರದ ಮಣ್ಣಿನ ದಿಬ್ಬ ಕುಸಿದು ಅವರ ಮೇಲೆ ಬಿತ್ತು. ಮಣ್ಣಿನೊಳಕ್ಕೆ ಸಿಲುಕಿದ ಮೂವರು ಸ್ಥಳದಲ್ಲೇ ಮೃತಪಟ್ಟರು. ಒಬ್ಬರು ತೀವ್ರವಾಗಿ ಗಾಯಗೊಂಡಿದ್ದಾರೆ.</p>.<p>ವಿಟ್ಲ ಸಮೀಪದ ಆಲಂಗಾರು ನಿವಾಸಿ ಬಾಲಪ್ಪ ನಾಯ್ಕ, ಮುರುವ ನಿವಾಸಿ ಪ್ರಕಾಶ್ ಮತ್ತು ವಿಟ್ಲಪಡ್ನೂರು ಗ್ರಾಮದ ಕಾಪು ಮಜಲು ನಿವಾಸಿ ರಮೇಶ್ ಮಣ್ಣಿನೊಳಗೆ ಸಿಲುಕಿ ಮೃತಪಟ್ಟಿದ್ದರು. ಶವಗಳನ್ನು ಹೊರತೆಗೆಯಲಾಗಿದೆ. ಉಳ್ಳಾಲ ನಿವಾಸಿ ಪ್ರಭಾಕರ ಎಂಬುವವರು ತೀವ್ರವಾಗಿ ಗಾಯಗೊಂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಟ್ಲ:</strong> ಸಮೀಪದ ಒಡಿಯೂರು ಗುರುದೇವದತ್ತ ಸಂಸ್ಥಾನದ ಆವರಣದಲ್ಲಿ ಹೊಸ ಕಟ್ಟಡವೊಂದರ ನಿರ್ಮಾಣಕ್ಕೆ ಪಿಲ್ಲರ್ ಹಾಕಲು ಶನಿವಾರ ಗುಂಡಿ ತೆಗೆದು, ನೆಲ ಸಮತಟ್ಟು ಮಾಡುತ್ತಿದ್ದ ವೇಳೆ ಮೇಲಿನಿಂದ ಮಣ್ಣಿನ ದಿಬ್ಬ ಕುಸಿದು ಮೂವರು ಕಾರ್ಮಿಕರು ಮೃತಪಟ್ಟಿದ್ದಾರೆ.</p>.<p>ಜೆಸಿಬಿ ಯಂತ್ರದಿಂದ ಗುಂಡಿ ತೆಗೆದಿದ್ದು, ಸಂಜೆ 5 ಗಂಟೆ ಸುಮಾರಿಗೆ ನಾಲ್ವರು ಕಾರ್ಮಿಕರು ಗುಂಡಿಯೊಳಕ್ಕೆ ಇಳಿದು ನೆಲ ಸಮತಟ್ಟು ಮಾಡುತ್ತಿದ್ದರು. ಆಗ ಮೇಲಿನಿಂದ ಬೃಹತ್ ಗಾತ್ರದ ಮಣ್ಣಿನ ದಿಬ್ಬ ಕುಸಿದು ಅವರ ಮೇಲೆ ಬಿತ್ತು. ಮಣ್ಣಿನೊಳಕ್ಕೆ ಸಿಲುಕಿದ ಮೂವರು ಸ್ಥಳದಲ್ಲೇ ಮೃತಪಟ್ಟರು. ಒಬ್ಬರು ತೀವ್ರವಾಗಿ ಗಾಯಗೊಂಡಿದ್ದಾರೆ.</p>.<p>ವಿಟ್ಲ ಸಮೀಪದ ಆಲಂಗಾರು ನಿವಾಸಿ ಬಾಲಪ್ಪ ನಾಯ್ಕ, ಮುರುವ ನಿವಾಸಿ ಪ್ರಕಾಶ್ ಮತ್ತು ವಿಟ್ಲಪಡ್ನೂರು ಗ್ರಾಮದ ಕಾಪು ಮಜಲು ನಿವಾಸಿ ರಮೇಶ್ ಮಣ್ಣಿನೊಳಗೆ ಸಿಲುಕಿ ಮೃತಪಟ್ಟಿದ್ದರು. ಶವಗಳನ್ನು ಹೊರತೆಗೆಯಲಾಗಿದೆ. ಉಳ್ಳಾಲ ನಿವಾಸಿ ಪ್ರಭಾಕರ ಎಂಬುವವರು ತೀವ್ರವಾಗಿ ಗಾಯಗೊಂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>