<p>ಉಳ್ಳಾಲ: ಎರಡು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಗೆ ಇಲ್ಲಿನ ಹಳೇಕೋಟೆ ಬಳಿ ಗುಡ್ಡೆ ಜರಿದು ಕಟ್ಟಡವೊಂದು ಅಪಾಯದಂಚಿಗೆ ಸಿಲುಕಿದೆ. ಈ ಕಟ್ಟಡದಲ್ಲಿ ವಾಸವಾಗಿದ್ದ ಮೂರು ಕುಟುಂಬಗಳನ್ನು ಬೇರೆಡೆ ಸ್ಥಳಾಂತರ ಮಾಡಲಾಗಿದೆ.</p>.<p>ಹಳೆಕೋಟೆ ನಿವಾಸಿ ಅಬ್ದುಲ್ಲಾ ಅವರ ಮಾಲೀಕತ್ವದ ಬಾಡಿಗೆ ನೀಡಿದ್ದ ಕಟ್ಟಡ ಅಪಾಯದಲ್ಲಿದ್ದು, ಗುಡ್ಡೆ ಜರಿದಿದ್ದರಿಂದ ಕಟ್ಟಡ ಬಿರುಕು ಬಿಟ್ಟಿದೆ. ವಿದ್ಯುತ್ ಕಂಬ ಉರುಳಿ ಬಿದ್ದಿದ್ದು, ರಸ್ತೆ ಸಂಪೂರ್ಣ ಹದಗೆಟ್ಟಿದೆ. ವರ್ಷದ ಹಿಂದೆ ಈ ಭಾಗದಲ್ಲಿ ರಸ್ತೆ ಕುಸಿದು ಬಿದ್ದು ಹಾನಿಯಾಗಿತ್ತು.</p>.<p>‘ಈ ಸಂದರ್ಭದಲ್ಲಿ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳಿಗೆ ಮತ್ತು ಶಾಸಕ ಯು.ಟಿ.ಖಾದರ್ ಗಮನ ತಂದಿದ್ದೆವು. ಆದರೆ ದುರಸ್ತಿಯ ಭರವಸೆ ಮಾತ್ರ ದೊರಕಿದ್ದು, ರಸ್ತೆ ದುರಸ್ತಿಯಾಗಿಲ್ಲ’ ಎಂದು ಸ್ಥಳೀಯ ಕೌನ್ಸಿಲರ್ ಝರೀನಾ ರವೂಫ್ ತಿಳಿಸಿದರು.</p>.<p>ಘಟನಾ ಸ್ಥಳಕ್ಕೆ ನಗರಸಭಾ ಪೌರಾಯುಕ್ತ ರಾಯಪ್ಪ, ಗ್ರಾಮಕರಣಿಕ ಪ್ರಮೋದ್, ಸಹಾಯಕ ನವನೀತ್, ಕೌನ್ಸಿಲರ್ ಝರೀನ ರವೂಫ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಉಳ್ಳಾಲ: ಎರಡು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಗೆ ಇಲ್ಲಿನ ಹಳೇಕೋಟೆ ಬಳಿ ಗುಡ್ಡೆ ಜರಿದು ಕಟ್ಟಡವೊಂದು ಅಪಾಯದಂಚಿಗೆ ಸಿಲುಕಿದೆ. ಈ ಕಟ್ಟಡದಲ್ಲಿ ವಾಸವಾಗಿದ್ದ ಮೂರು ಕುಟುಂಬಗಳನ್ನು ಬೇರೆಡೆ ಸ್ಥಳಾಂತರ ಮಾಡಲಾಗಿದೆ.</p>.<p>ಹಳೆಕೋಟೆ ನಿವಾಸಿ ಅಬ್ದುಲ್ಲಾ ಅವರ ಮಾಲೀಕತ್ವದ ಬಾಡಿಗೆ ನೀಡಿದ್ದ ಕಟ್ಟಡ ಅಪಾಯದಲ್ಲಿದ್ದು, ಗುಡ್ಡೆ ಜರಿದಿದ್ದರಿಂದ ಕಟ್ಟಡ ಬಿರುಕು ಬಿಟ್ಟಿದೆ. ವಿದ್ಯುತ್ ಕಂಬ ಉರುಳಿ ಬಿದ್ದಿದ್ದು, ರಸ್ತೆ ಸಂಪೂರ್ಣ ಹದಗೆಟ್ಟಿದೆ. ವರ್ಷದ ಹಿಂದೆ ಈ ಭಾಗದಲ್ಲಿ ರಸ್ತೆ ಕುಸಿದು ಬಿದ್ದು ಹಾನಿಯಾಗಿತ್ತು.</p>.<p>‘ಈ ಸಂದರ್ಭದಲ್ಲಿ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳಿಗೆ ಮತ್ತು ಶಾಸಕ ಯು.ಟಿ.ಖಾದರ್ ಗಮನ ತಂದಿದ್ದೆವು. ಆದರೆ ದುರಸ್ತಿಯ ಭರವಸೆ ಮಾತ್ರ ದೊರಕಿದ್ದು, ರಸ್ತೆ ದುರಸ್ತಿಯಾಗಿಲ್ಲ’ ಎಂದು ಸ್ಥಳೀಯ ಕೌನ್ಸಿಲರ್ ಝರೀನಾ ರವೂಫ್ ತಿಳಿಸಿದರು.</p>.<p>ಘಟನಾ ಸ್ಥಳಕ್ಕೆ ನಗರಸಭಾ ಪೌರಾಯುಕ್ತ ರಾಯಪ್ಪ, ಗ್ರಾಮಕರಣಿಕ ಪ್ರಮೋದ್, ಸಹಾಯಕ ನವನೀತ್, ಕೌನ್ಸಿಲರ್ ಝರೀನ ರವೂಫ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>