ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಂಗಳೂರು: ನಿರ್ಮಾಣ ಕಾಮಗಾರಿ ವೇಳೆ ಗುಡ್ಡ ಕುಸಿತ: ಕಾರ್ಮಿಕ ಪಾರು

Last Updated 21 ಜೂನ್ 2021, 4:46 IST
ಅಕ್ಷರ ಗಾತ್ರ

ಮಂಗಳೂರು: ತಾಲ್ಲೂಕಿನ ಮುತ್ತೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಾರ್ಗದಂಗಡಿ-ನೋಣಾಲ್‌ನ ರಸ್ತೆ ಬದಿಯ ತಡೆಗೋಡೆ ನಿರ್ಮಾಣ ಕಾಮಗಾರಿ ವೇಳೆ ಭಾನುವಾರ ಗುಡ್ಡ ಕುಸಿದ ಪರಿಣಾಮ ಕಾರ್ಮಿಕ ರಾಜೇಶ ಪೂಜಾರಿ (28) ಮಣ್ಣಿನಡಿ ಸಿಲುಕಿದ್ದರು.

ತಕ್ಷಣ ಜೆಸಿಬಿ ಮೂಲಕ ಮಣ್ಣು ತೆರವುಗೊಳಿಸಲಾಯಿತು. ಎರಡು ಗಂಟೆ ಕಾರ್ಯಾಚರಣೆ ನಡೆಸಿ, ರಾಜೇಶ್ ಅವರನ್ನು ಮಣ್ಣಿನಿಂದ ಮೇಲೆತ್ತಲಾಯಿತು.

ಕೆಲವು ದಿನಗಳಿಂದ ಸತತವಾಗಿ ಸುರಿಯುತ್ತಿರುವ ಮಳೆಗೆ ಗುಡ್ಡ ಕುಸಿತವಾಗಿದ್ದು, ಮತ್ತಷ್ಟು ಅಪಾಯ ಸಂಭವಿಸುವ ಮುನ್ನ ಜನಪ್ರತಿನಿಧಿಗಳು, ಅಧಿಕಾರಿಗಳು ಗಮನಹರಿಸಬೇಕು ಎಂದು ಸಾರ್ವಜನಿಕರು ವಿನಂತಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT